Publish Date: Fri, 29 Jun 2018 (16:30 IST)
Updated Date: Fri, 29 Jun 2018 (16:35 IST)
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಕಾಗಿನೆಲೆ ಮಹಾಸಂಸ್ಥಾನದ ಪೀಠಾಧ್ಯಕ್ಷ ನಿರಂಜನಾನಂದಪುರಿ ಶ್ರೀ ಎಚ್ಚರಿಕೆ ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ನಿರ್ಲಕ್ಷ್ಯ ಮಾಡಿದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಗುಡುಗಿದ್ದಾರೆ.
ಒಂದು ವೇಳೆ ಸಿದ್ದರಾಮಯ್ಯನವರನ್ನು ನಿರ್ಲಕ್ಷ್ಯ ಮಾಡಿದಲ್ಲಿ ಕಾಂಗ್ರೆಸ್ 15 ಸ್ಥಾನಗಳನ್ನು ಸಹ ಗಳಿಸುವುದಿಲ್ಲ ಎಂದು ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾ
ತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಈ ಕಟು ಸತ್ಯವನ್ನು ಅರ್ಥ ಮಾಡಿಕೊಳ್ಳಬೇಕು. ನಿರ್ಲಕ್ಷ್ಯ ಧೋರಣೆ ಮುಂದುವರಿದರೆ ನಾವು ಸುಮ್ಮನೇ ಬಿಡುವುದಿಲ್ಲ ಎಂದು ಖಡಕ್ ಸಂದೇಶ ರವಾನಿಸಿದ್ದಾರೆ.
ಸಿದ್ದರಾಮಯ್ಯ ಸುಮ್ಮನೆ ಇದ್ದಾರೆ ಎಂದರೆ ಮುಂದಿನ ಹೆಜ್ಜೆ ಇಡಲು ಟಗರು ಸಿದ್ಧಗೊಳ್ಳುತ್ತಿದೆ ಎಂದರ್ಥ ಎಂದು ಕಾಗಿನೆಲೆ ಶ್ರೀ ಹೇಳಿದ್ದಾರೆ.