ಹೊಸಪೇಟೆ, ಕೊಪ್ಪಳದಲ್ಲಿ `ಕೈ' ಸಮಾವೇಶ

Webdunia
ಮಂಗಳವಾರ, 17 ಜನವರಿ 2023 (19:59 IST)
ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕೈಗೊಂಡಿರುವ ‘ಪ್ರಜಾಧ್ವನಿ’ ರಥಯಾತ್ರೆ  ಪುನಾರಂಭವಾಗಿದೆ. ಇದಕ್ಕಾಗಿ ಹೊಸಪೇಟೆ ಹಾಗೂ ಕೊಪ್ಪಳದಲ್ಲಿ ಬೃಹತ್‌ ಸಮಾವೇಶ ಆಯೋಜಿಸಲಾಗಿತ್ತು.  ಹೊಸಪೇಟೆಯ ಪುನೀತ್‌ ರಾಜ್‌ಕುಮಾರ್‌ ಜಿಲ್ಲಾ ಕ್ರೀಡಾಂಗಣ ಹಾಗೂ ಮಧ್ಯಾಹ್ನ 4 ಗಂಟೆಗೆ ಕೊಪ್ಪಳದ ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಬೃಹತ್‌ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ‘ಕೈ’ ಪಡೆ ಮುಂದಾಗಿದೆ. ಬಳ್ಳಾರಿ, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ 15 ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಕೈ ಪಡೆ ‘ಪ್ರಜಾಧ್ವನಿ’ ಯಾತ್ರೆಯ ಮೂಲಕ ಕಾಂಗ್ರೆಸ್‌ ಪರ ಅಲೆ ಸೃಷ್ಟಿಸುವ ಇರಾದೆ ಹೊಂದಿದೆ. ವಿಧಾನಸಭಾ ಚುನಾವಣೆಯ ಅಧಿಕೃತ ಪ್ರಚಾರಾಂದೋಲನಕ್ಕೆ ಜ.11ರಂದು ಚಾಲನೆ ನೀಡಿದ್ದ ಕಾಂಗ್ರೆಸ್‌, ಬೆಳಗಾವಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ತಂಗಿದ್ದ ಗಾಂಧಿ ಬಾವಿಯಲ್ಲಿ ‘ಪ್ರಜಾಧ್ವನಿ’ ರಥಯಾತ್ರೆಗೆ ಚಾಲನೆ ನೀಡಿತ್ತು. ಸಂಕ್ರಾಂತಿ ಹಿನ್ನೆಲೆಯಲ್ಲಿ ಯಾತ್ರೆಯನ್ನು 5 ದಿನಗಳ ಕಾಲ ಮುಂದೂಡಲಾಗಿತ್ತು. ಇಂದು ಹೊಸಪೇಟೆಯಿಂದ ಯಾತ್ರೆ ಪುನಾರಂಭಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇಂದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಶ್ರೀಕೃಷ್ಣನಂತೆ ಯಾವುದೇ ಮಗು ಜೈಲಿನಲ್ಲಿ ಜನಿಸಿದ ಕಳಂಕವನ್ನು ಎದುರಿಸಬಾರದು: ನಿದಾ ಖಾನ್‌ಗೆ ಜಾಮೀನು

ಮುಂದಿನ ಸುದ್ದಿ
Show comments