Webdunia - Bharat's app for daily news and videos

Install App

ಕೈ-ಕಮಲ ಕಾರ್ಯಕರ್ತರ ಮಾರಾಮಾರಿ ಪ್ರಕರಣ ; ಮೂರು ಪ್ರತ್ಯೇಕ ಎಫ್ಐಆರ್ ದಾಖಲು

Webdunia
ಶನಿವಾರ, 18 ಮಾರ್ಚ್ 2023 (12:05 IST)
ಫ್ಲೆಕ್ಸ್‌ ಹಾಕುವ ವಿಚಾರವಾಗಿ ಸಚಿವ ವಿ.ಸೋಮಣ್ಣ ಹಾಗೂ ಮಾಜಿ ಶಾಸಕ ಪ್ರಿಯಕೃಷ್ಣ ಬೆಂಬಲಿಗರ ನಡುವೆ ಮಾರಾಮಾರಿ ನಡೆದ  ಘಟನೆಗೆ ಸಂಬಂಧಿಸಿದಂತೆ ಗೋವಿಂದರಾಜ ನಗರ ಠಾಣೆಯಲ್ಲಿ ಒಟ್ಟು ಮೂರು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.ಘಟನೆಯ ಕುರಿತು ಪೊಲೀಸರೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಇದಲ್ಲದೇ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ನೀಡಿರುವ ದೂರು - ಪ್ರತಿದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
 
ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿರುವ ಆರೋಪದ‌ ಮೇಲೆ ಮೂವತ್ತಾರು ಜನರ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದಲ್ಲದೇ ಕಾಂಗ್ರೆಸ್ ಕಾರ್ಯಕರ್ತೆ ಪ್ರೇಮಲತಾ ನೀಡಿರುವ ದೂರಿನನ್ವಯ ಹತ್ತು‌ ಜನರ ವಿರುದ್ಧ ಹಲ್ಲೆ ಹಾಗೂ ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ. ಪ್ರತಿಯಾಗಿ ಬಿಜೆಪಿ ಕಾರ್ಯಕರ್ತೆ ರಮ್ಯಾ ಎಂಬುವವರು ಸಹ ದೂರು ನೀಡಿದ್ದು, ಅದರನ್ವಯ ಎಂಟು ಜನರ ವಿರುದ್ಧ ಹಲ್ಲೆ, ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ.
 
ಫ್ಲೆಕ್ಸ್ ಹಾಕುವ ವಿಚಾರಕ್ಕೆ ನಿನ್ನೆ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಬಿಜಿಎಸ್ ನೈದಾನದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ  ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿತ್ತು. ಭಾನುವಾರ ಬಿಜಿಎಸ್ ಮೈದಾನದಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕ್ರಮಕ್ಕಾಗಿ ಫ್ಲೆಕ್ಸ್​ ಹಾಕಲು ಆಗಮಿಸಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನ ತಡೆದಿದ್ದ ಬಿಜೆಪಿ ಕಾರ್ಯಕರ್ತರು ಕಾರ್ಯಕ್ರಮದ ಹಿಂದಿನ ದಿನ ಫ್ಲೆಕ್ಸ್​ ಹಾಕಿಕೊಳ್ಳಿ ಎಂದಾಗ ಎರಡೂ ಗುಂಪುಗಳ ನಡುವೆ ತಳ್ಳಾಟ, ನೂಕಾಟ ನಡೆದಿತ್ತು. ಬಳಿಕ  ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments