Webdunia - Bharat's app for daily news and videos

Install App

ಕೈ-ಕಮಲ ಟ್ವಿಟರ್ ವಾರ್!

Webdunia
ಬುಧವಾರ, 13 ಅಕ್ಟೋಬರ್ 2021 (13:42 IST)
ಬೆಂಗಳೂರು (ಅ 13) :  ಆಡಳಿತ ಪಕ್ಷ ಬಿಜೆಪಿ ಕಮಿಷನ್ ರಾಜಕಾರಣ ಮಾಡುತ್ತಿದೆ, ಕೊರೋನಾ ಕಾಲದಲ್ಲೂ ಭ್ರಷ್ಟಾಚಾರ ಎಗಿದೆ ಎಂದು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್  ಕಳೆದ ಒಂದು ವರ್ಷದಿಂದ ಆರೋಪಿಸುತ್ತಿದೆ.

ಈ ಬಗ್ಗೆ ಹೋರಾಟವನ್ನೂ ರೂಪಿಸಿತ್ತು. ಆದರೆ, ನಿನ್ನೆ ಕಾಂಗ್ರೆಸ್ ಪಕ್ಷದ ಪತ್ರಿಕಾಗೋಷ್ಠಿಯಲ್ಲೇ ಲೀಕ್ ಆದ ಒಂದು ಆಡಿಯೋ ಇದೀಗ ಸ್ವತಃ ಕಾಂಗ್ರೆಸ್ ಪಕ್ಷವನ್ನು ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನೇ ಮುಜುಗುರಕ್ಕೆ ಈಡುಮಾಡಿದೆ. ಡಿ.ಕೆ. ಶಿವಕುಮಾರ್ ಕಮಿಷನ್ ರಾಜಕಾರಣ ನಡೆಸುತ್ತಿದ್ದಾರ? ಅವರ ಎಲ್ಲಾ ಬೆಂಬಲಿಗರೂ ಕೋಟಿ ಕೋಟಿ ಲೂಟಿ ಮಾಡಿದ ಭ್ರಷ್ಟರಾ? ಎಂಬ ಚರ್ಚೆಗಳು ಇದೀಗ ರಾಜ್ಯ ರಾಜಕಾರಣದಲ್ಲಿ ಹರಿದಾಡುದಾಡುತ್ತಿದೆ. ಅಲ್ಲದೆ, ಈ ವಿಚಾರ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಟ್ವಿಟರ್ ವಾರ್ ಅರ್ಥಾತ್ ಕೆಸರೆರಚಾಟಕ್ಕೂ ಕಾರಣವಾಗಿದೆ.
ಏನಿದು ಘಟನೆ?
ನಿನ್ನೆ ಕಾಂಗ್ರೆಸ್ ಕಚೇರಿಯಲ್ಲಿ ಹಿರಿಯ ನಾಯಕ ಉಗ್ರಪ್ಪ ಪತ್ರಿಕಾಗೋಷ್ಠಿ ಆಯೋಜಿಸಿದ್ದರು. ಈ ಪತ್ರಿಕಾಗೋಷ್ಠಿ ಆರಂಭಕ್ಕೂ ಮುನ್ನ ಅವರ ಪಕ್ಕ ಕುಳಿತಿದ್ದ ಕಾಂಗ್ರೆಸ್ ಮಾಧ್ಯಮ ಸಂಯೋಜನ ಸಲೀಂ ಉಗ್ರಪ್ಪ ಅವರ ಕಿವಿಯಲ್ಲಿ ಜಲ ಸಂಪನ್ಮೂಲ ಇಲಾಖೆಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದರು. ಅಲ್ಲದೆ, "ಈ ಭ್ರಷ್ಟಾಚಾರದಲ್ಲಿ ಡಿ.ಕೆ. ಶಿವಕುಮಾರ್ ಬೆಂಬಲಿಗರು ನೂರಾರು ಕೋಟಿ ಹಣ ಲೂಟಿ ಮಾಡಿದ್ದು, ಸ್ವತಃ ಡಿಕೆಶಿ ಅವರಿಗೆ 8 ರಿಂದ 12 ಪರ್ಸೆಂಟ್ ಕಮಿಷನ್ ಹೋಗುತ್ತದೆ" ಎಂದಿದ್ದರು. ಆದರೆ, ಪತ್ರಿಕಾಗೋಷ್ಠಿಯಲ್ಲಿ ಮೈಕ್ ಆಫ್ ಆಗಿರದ ಕಾರಣ ಈ ಖಾಸಗಿ ಸಂಭಾಷಣೆ ಇದೀಗ ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

ಮುಂದಿನ ಸುದ್ದಿ
Show comments