Publish Date: Mon, 24 Apr 2023 (19:20 IST)
Updated Date: Mon, 24 Apr 2023 (19:53 IST)
ಕಾಂಗ್ರೆಸ್ನಿಂದ ಟಿಕೆಟ್ ಸಿಗದೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವವರು ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಕೊಲ್ಲೂರಿನಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಬಂಡಾಯ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಬಂಡಾಯ ಎದ್ದಿದ್ದ ನಾಯಕರ ಮನವೊಲಿಕೆ ಮಾಡಲಾಗಿದೆ. ಇಂದು ಬಂಡಾಯ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದು ತಿಳಿಸಿದರು. ಕರ್ನಾಟಕದಲ್ಲಿ ಅತೀ ಭ್ರಷ್ಟ ಸರ್ಕಾರ ಅಂದರೆ ಬಿಜೆಪಿ ಸರ್ಕಾರ. ಅವರದ್ಧೇ ಪಕ್ಷದ ಆನೇಕ ನಾಯಕರು ಭ್ರಷ್ಟಾಚಾರದ ಬಗ್ಗೆ ಹೇಳಿದ್ದಾರೆ. 40 ಪರ್ಸೆಂಟ್ ಸರ್ಕಾರವನ್ನ ಕಿತ್ತೊಗೆಯಬೇಕು. ಭ್ರಷ್ಟಾಚಾರ ನಿರ್ಮೂಲನೆ ಮಾಡುವುದು ನಮ್ಮ ಗುರಿ ಎಂದು ತಿಳಿಸಿದ್ರು.
geetha
Publish Date: Mon, 24 Apr 2023 (19:20 IST)
Updated Date: Mon, 24 Apr 2023 (19:53 IST)