ಸರಿಯಾಗಿ ಕೆಲಸ ಮಾಡಿ, ಇಲ್ಲದಿದ್ದರೇ ವರ್ಗಾವಣೆ ಮಾಡಿಸಿಕೊಂಡು ಹೊರಡಿ ಎಂದು ಕಲಬುರ್ಗಿ ಉಸ್ತುವಾರಿ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕಲಬುರ್ಗಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೆಡಿಪಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಮಾತನಾಡಿದ ಉಸ್ತುವಾರಿ ಸಚಿವರು, ಸೋಮಾರಿಗಳಿಗೆ ಇಲ್ಲಿ ಜಾಗವಿಲ್ಲ. ಸರಿಯಾಗಿ ಕೆಸಲ ಮಾಡಿ ಇಲ್ಲದಿದ್ದರೇ ವರ್ಗಾವಣೆ ಮಾಡಿಸಿಕೊಂಡು ಹೊರಡಿ ಎಂದು ಅಧಿಕಾರಿಗಳಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ನಾನು ಕಲಬುರ್ಗಿಯಲ್ಲಿ ಹುಟ್ಟಿ ಬೆಳೆದಿದ್ದೇನೆ. ಯಾವ ಇಲಾಖೆಯಲ್ಲಿ ಏನು ನಡೆಯುತ್ತದೆ ಎಂದು ನನಗೆ ತಿಳಿದಿರುತ್ತದೆ. ಸಾರ್ವಜನಿಕರಿಗೆ ತೊಂದರೆ ನೀಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಉಸ್ತುವಾರಿ ಸಚಿವ ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ