Webdunia - Bharat's app for daily news and videos

Install App

ಅಬ್ದುಲ್ ಕಲಾಂ ವಿಧಿವಶ: ರಾಮೇಶ್ವರಂನಲ್ಲಿ ನೀರವ ಮೌನ

Webdunia
ಮಂಗಳವಾರ, 28 ಜುಲೈ 2015 (17:29 IST)
ಖ್ಯಾತ ವಿಜ್ಞಾನಿ, ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ನಿಧನ ಹಿನ್ನೆಲೆಯಲ್ಲಿ ಅವರ ಹುಟ್ಟೂರಾದ ತಮಿಳುನಾಡಿನ ರಾಮನಾಥಪುರಂನ ರಾಮೇಶ್ವರಂ ಗ್ರಾಮದಲ್ಲಿ ಪ್ರಸ್ತುತ ನೀರವ ಮೌನ ಆವರಿಸಿದೆ. 
 
ಪ್ರಸ್ತುತ ಕಲಾಂ ಮನೆ ಹಾಗೂ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಅವರ ನಿವಾಸದ ಹೊರ ಭಾಗದಲ್ಲಿ ಕಲಾಂ ಅವರ ಭಾವಚಿತ್ರವನ್ನಿಡಲಾಗಿದ್ದು, ಸಾರ್ವಜನಿಕರು ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸುತ್ತಿದ್ದಾರೆ. ಕಲಾಂ ನಿಧನ ಹಿನ್ನೆಲೆಯಲ್ಲಿ ಯಾವುದೇ ಭೇದ ಭಾವವಿಲ್ಲದೆ ಗ್ರಾಮದ ಎಲ್ಲಾ ಸಾರ್ವಜನಿಕರು ಮನೆಗೆ ಭೇಟಿ ನೀಡುತ್ತಿದ್ದು, ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.   
 
ಕಲಾಂ ಅವರ ಶರೀರವು ಗುರುವಾರ ಬೆಳಗ್ಗೆ ಗ್ರಾಮಕ್ಕೆ ತರಲಾಗುತ್ತಿದ್ದು, ಅಂದೇ ಅಂತ್ಯಕ್ರಿಯೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಂದ ಕುಮಾರ್ ನೇತೃತ್ವದಲ್ಲಿ ಈಗಾಗಲೇ ಮೂರು ಸ್ಥಳಗಳನ್ನು ಅಂತ್ಯಕ್ರಿಯೆಗಾಗಿ ಗುರುತಿಸಿಲಾಗಿದೆ. ರಾಮೇಶ್ವರಂ ರೈಲ್ವೆ ನಿಲ್ದಾಣ, ಕಾಚುವಳ್ಳಿ ಹಾಗೂ ನಟರಾಜಪುರಂ ಗುರುತಿಸಿದ ಸ್ಥಳಗಳಾಗಿವೆ. 
 
ಯಾವ ಸ್ಥಳದಲ್ಲಿ ಅಂತ್ಯಕ್ರಿಯೆ ಮಾಡಬೇಕು ಎಂಬ ಬಗ್ಗೆ ಕುಟುಂಬಸ್ಥರು ಹಾಗೂ ಪ್ರಮುಖ ಅಧಿಕಾರಿಗಳು ಇನ್ನೂ ಚರ್ಚೆ ನಡೆಸುತ್ತಿದ್ದು, ಜಿಲ್ಲಾಡಳಿತದಿಂದ ಶೀಘ್ರದಲ್ಲಿಯೇ ಅಂತಿಮ ತೀರ್ಮಾನ ಹೊರ ಬೀಳಲಿದೆ ಎಂದು ಹೇಳಲಾಗುತ್ತಿದೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments