Webdunia - Bharat's app for daily news and videos

Install App

ಕಳಸಾ ಬಂಡೂರಿ, ಮಹದಾಯಿ ವಿವಾದ: ಮೋದಿ ಮಧ್ಯಸ್ಥಿಕೆಗೆ ಸಿಎಂ ಸಿದ್ದರಾಮಯ್ಯ ಮನವಿ

Webdunia
ಗುರುವಾರ, 6 ಅಕ್ಟೋಬರ್ 2016 (12:52 IST)
ಕಳಸಾ ಬಂಡೂರಿ ಹಾಗೂ ಮಹದಾಯಿ ಜಲ ವಿವಾದವನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಡುವಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. 
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳಲ್ಲಿ ಜಂಟಿ ಸರ್ವೆ ಆರಂಭವಾಗಿದೆ. ಮೈಸೂರು ಜಿಲ್ಲೆಯಲ್ಲಿ 51 ಸಾವಿರ ಎಕರೆ ಪ್ರದೇಶ ಪಾಳು ಬಿದ್ದಿದೆ. ಈಗಾಗಲೇ 4.51 ಲಕ್ಷ ಎಕರೆ ಪ್ರದೇಶಕ್ಕೆ ನೀರು ಬಿಡುಗಡೆ ಮಾಡಿದ್ದೇವೆ ಎಂದು ಹೇಳಿದರು.
 
ಮಳೆ ಕೊರತೆಯಿಂದ ರಾಜ್ಯ ಬರಗಾಲ ಪರಿಸ್ಥಿತಿ ಎದುರಿಸುತ್ತಿದೆ. ಹೀಗಾಗಿ ರಾಜ್ಯದ ಒಟ್ಟು 110 ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಗುರುತಿಸಲಾಗಿದೆ. ಇನ್ನೂ ಹಲವು ತಾಲೂಕಿನಲ್ಲಿ ಸರ್ವೆ ಕಾರ್ಯ ನಡೆಯುತ್ತಿದೆ ಎಂದು  ತಿಳಿಸಿದ್ದಾರೆ.
 
ಕಾವೇರಿ ಕಣಿವೆಯ ರೈತರಿಗೆ ಪರಿಹಾರ ಕೊಡುವ ಕುರಿತಂತೆ ಚರ್ಚೆ ನಡೆಯುತ್ತಿವೆ. ಆದರೆ, ಯಾವುದೇ ಅಂತಿಮ ನಿರ್ಧಾರವಾಗಿಲ್ಲ. ಮುಂಬರುವ ದಿನಗಳಲ್ಲಿ ಸಚಿವ ಸಂಪುಟದೊಂದಿಗೆ ಚರ್ಚಿಸಿ ರೈತಪರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದು ಎಷ್ಟಾಗಿದೆ ನೋಡಿ

Video: ಪಾಕಿಸ್ತಾನ ಸದೆಬಡಿಯಲು ಸೇನಾ ವಾಹನ ಸಾಗುತ್ತಿದ್ದರೆ ರಸ್ತೆಯಲ್ಲಿ ಜೈಕಾರ ಹಾಕಿದ ಭಾರತೀಯರು

India Pakistan: ನಿಮ್ಮ ಭಾಷಣ ಯಾರಿಗೆ ಬೇಕು, ಪಾಕಿಸ್ತಾನ ಪ್ರಧಾನಿಗೆ ಜನರಿಂದಲೇ ಛೀಮಾರಿ

India Pakistan: ಚಂಢೀಘಡದಲ್ಲಿ ಮೊಳಗಿದ ಸೈರನ್, ಪಾಕ್ ನಿಂದ ದಾಳಿ ನಿರೀಕ್ಷೆ

India Pakistan: ಭಾರತಕ್ಕೆ ಪಾಕಿಸ್ತಾನ ಅಟ್ಯಾಚ್ಡ್ ಟಾಯ್ಲೆಟ್, ಹಿಗ್ಗಾಮುಗ್ಗಾ ಟ್ರೋಲ್

ಮುಂದಿನ ಸುದ್ದಿ
Show comments