Select Your Language

Notifications

webdunia
webdunia
webdunia
webdunia

ಬಸ್ ಅಪಘಾತ: ಕಲಬುರಗಿ ಲೋಕಾಯುಕ್ತ ಎಸ್‌ಪಿ ಸ್ಥಳದಲ್ಲೇ ಸಾವು

ಬಸ್ ಅಪಘಾತ: ಕಲಬುರಗಿ ಲೋಕಾಯುಕ್ತ ಎಸ್‌ಪಿ ಸ್ಥಳದಲ್ಲೇ ಸಾವು
ಹಾವೇರಿ , ಶುಕ್ರವಾರ, 16 ಸೆಪ್ಟಂಬರ್ 2016 (11:30 IST)
ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ ಪರಿಣಾಮವಾಗಿ ಕಲಬುರಗಿ ಲೋಕಾಯುಕ್ತ ಎಸ್‌ಪಿ ಸ್ಥಳದಲ್ಲೇ ಸ್ಥಾವನ್ನಪಿದ್ದು, 12 ಜನರು ಗಾಯಗೊಂಡಿರುವ ಘಟನೆ ಹಾವೇರಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. 
 
ಗಂಭೀರವಾಗಿ ಗಾಯಗೊಂಡಿರುವ ಮೂವರು ಪ್ರಯಾಣಿಕರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಉಳಿದ ಒಂಬತ್ತು ಗಾಯಾಳುಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. 
 
ನಿಂತ ಲಾರಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ ಈ ಘಟನೆ ಸಂಭವಿಸಿದ್ದು, ಅಪಘಾತದ ಘಟನೆ ನೋಡುತ್ತಿದ್ದ ಟಿಟಿ ವಾಹನದಲ್ಲಿದ್ದ ಒಂಬತ್ತು ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಎಸ್‌ಪಿ ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 
 
ಸರಕಾರಿ ಬಸ್ ಬೆಳಗಾವಿಯಿಂದ ಬೆಂಗಳೂರಿನ ಕಡೆ ಸಂಚರಿಸುತ್ತಿತ್ತು. ಈ ದುರ್ಘಟನೆ ಕುರಿತು ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಸವಾದಿ ಪ್ರಮುಖರು ನಿಜವಾದ ಹಿಂದೂ ಪ್ರತಿಪಾದಕರು