Webdunia - Bharat's app for daily news and videos

Install App

ನಗರದ ಬಿನ್ನಿಪೇಟೆ ಪೊಲೀಸ್ ಕ್ವಾರ್ಟರ್ಸ್​ನಲ್ಲಿ ವಾಸವಾಗಿದ್ದವರಿಗೆ ಪರ್ಯಾಯ ವ್ಯವಸ್ಥೆ-ಕಮಲ್ ಪಂತ್

Webdunia
ಶನಿವಾರ, 16 ಅಕ್ಟೋಬರ್ 2021 (22:11 IST)
ಬೆಂಗಳೂರು: ನಗರದ ಬಿನ್ನಿಪೇಟೆ ಪೊಲೀಸ್ ಕ್ವಾರ್ಟರ್ಸ್​ನಲ್ಲಿ ವಾಸವಾಗಿದ್ದವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಇನ್ನಿತರ ಕ್ವಾರ್ಟರ್ಸ್​ನಲ್ಲಿ ಹೊಸದಾಗಿ ವಾಸಕ್ಕೆ ಅಲಾಟ್ ಮಾಡಿದ್ದೇವೆ. ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂಜಿನಿಯರ್​ಗಳು, ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್​ನಿಂದ ಪರಿಶೀಲನೆ ನಡೆಸಲಾಗಿದೆ. ಕ್ವಾರ್ಟರ್ಸ್ ಕಟ್ಟಡ ವಾಲಲು ಕಾರಣ ಏನು ಎಂಬ ಬಗ್ಗೆ ಅವರು ವರದಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಕಟ್ಟಡದಲ್ಲಿ ತಾಂತ್ರಿಕ ಕೊರತೆ ಇದೆ. ಕಟ್ಟಡದಲ್ಲಿ ಎರಡು ವರ್ಷದಿಂದ ಜನರು ವಾಸವಿದ್ದಾರೆ. ಅಕ್ಟೋಬರ್ 16 ಈ ಘಟನೆ ಬಗ್ಗೆ ವರದಿ ಕೊಟ್ಟಿದ್ದಾರೆ. ಕಟ್ಟಡ ವಾಲಲು ಕಾರಣ ಏನು ಎಂಬ ಬಗ್ಗೆ ವರದಿಗೆ ಕಳುಹಿಸಲಾಗಿದೆ. ಜೊತೆಗೆ ಪರಿಹಾರ ಸಹ ಹುಡುಕಬೇಕಾಗಿದೆ. ಸದ್ಯಕ್ಕೆ ವಾಸವಾಗಿದ್ದವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
bangalore

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments