Select Your Language

Notifications

webdunia
webdunia
webdunia
webdunia

ಕಂಬಳಕ್ಕಾಗಿ ಜೈಲಿಗೆ ಹೋಗಲು ಸಿದ್ಧ: ವಾಟಾಳ್ ನಾಗರಾಜ್

ಕಂಬಳಕ್ಕಾಗಿ ಜೈಲಿಗೆ ಹೋಗಲು ಸಿದ್ಧ: ವಾಟಾಳ್ ನಾಗರಾಜ್
ಬೆಂಗಳೂರು , ಭಾನುವಾರ, 29 ಜನವರಿ 2017 (13:46 IST)
ಫೆಬ್ರವರಿ 1 ರಿಂದ ರಾಜ್ಯದಲ್ಲಿ ಕಂಬಳ ಕ್ರೀಡೆ ನಡೆದೆ ತಿರುತ್ತೇ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ರಾಜ್ಯ ಸರಕಾರ ಹಾಗೂ ನ್ಯಾಯಾಲಯಕ್ಕೆ ಸೆಡ್ಡು ಹೊಡೆದಿದ್ದಾರೆ.
 
ಕಂಬಳಕ್ಕೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಹಾಗೂ ನ್ಯಾಯಾಲಯದ ಅನುಮತಿಗಾಗಿ ಕಾಯುವುದು ಬೇಡ. ಕಂಬಳ ನಮ್ಮ ಸಾಂಸ್ಕೃತಿಕ ಕ್ರೀಡೆ, ಫೆಬ್ರವರಿ 1 ರಿಂದ ರಾಜ್ಯದಲ್ಲಿ ಕಂಬಳ ಕ್ರೀಡೆ ನಡೆದೆ ತಿರುತ್ತೇ. ಕಂಬಳಕ್ಕಾಗಿ ಜೈಲಿಗೆ ಹೋಗಲು ಸಿದ್ಧ ಎಂದರು. 
 
ಫೆಬ್ರವರಿ 27ಕ್ಕೆ ಕರ್ನಾಟಕ ಬಂದ್...
 
ದಕ್ಷಿಣ ಕನ್ನಡದ ಸಾಂಸ್ಕೃತಿಕ ಕ್ರೀಡೆ ಕಂಬಳಕ್ಕೆ ಅನುಮತಿ ನೀಡದಿದ್ದರೆ ಫೆಬ್ರವರಿ 27ಕ್ಕೆ ಕರ್ನಾಟಕ ಬಂದ್. ಬಂದ್‌ಗೆ ಸಾರಿಗೆ, ಹೋಟೆಲ್, ಚಿತ್ರೋಧ್ಯಮ ಸೇರಿದಂತೆ ಎಲ್ಲ ಸಂಘಟನೆಗಳು ಬೆಂಬಲ ನೀಡಿವೆ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಸ್ಪಷ್ಟಪಡಿಸಿದ್ದಾರೆ. 
 
ದಕ್ಷಿಣ ಕನ್ನಡದ ಸಾಂಸ್ಕೃತಿಕ ಕ್ರೀಡೆ ಕಂಬಳಕ್ಕಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 150 ಕ್ಕೂ ಹೆಚ್ಚು ಸಂಘಟನೆಯ ಸಾವಿರಾರು ಕಾರ್ಯಕರ್ತರು ಬೃಹತ್ ಪ್ರತಿಭಟನೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಹಿರಿತನಕ್ಕೆ ಬೆಲೆ ಇಲ್ಲದ ಪಕ್ಷಕ್ಕೆ ಭವಿಷ್ಯ ಇರುವುದಿಲ್ಲ: ಎಸ್.ಎಂ.ಕೃಷ್ಣ