ಕಂಬಳ ಉಳಿಸುವಂತೆ ಒತ್ತಾಯಿಸಿ ಸಾಂಕೇತಿಕ ಪ್ರತಿಭಟನೆ: ಜಯರಾಮ್ ಸೂಡಾ

Webdunia
ಶುಕ್ರವಾರ, 27 ಜನವರಿ 2017 (19:29 IST)
ದಕ್ಷಿಣ ಕನ್ನಡದ ಪಾರಂಪರಿಕ ಕ್ರೀಡೆ ಕಂಬಳವನ್ನು ಉಳಿಸುವಂತೆ ಒತ್ತಾಯಿಸಿ ಜನೆವರಿ 29ರಂದು ತುಳು ಕೂಟದ ವತಿಯಿಂದ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತುಳು ಕೂಟದ ಅಧ್ಯಕ್ಷ ಜಯರಾಮ ಸೂಡಾ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ತಮಿಳುನಾಡಿನ ಜಲ್ಲಿಕಟ್ಟು ಹಾಗೂ ಕಂಬಳಕ್ಕೂ ಹೂಲಿಕೆ ಮಾಡುವುದು ಸರಿಯಲ್ಲ. ಜಲ್ಲಿಕಟ್ಟು ಕ್ರೀಡೆಯಲ್ಲಿ ಸಾವುನೋವು ಸಂಭವಿಸುತ್ತದೆ. ಆದರೆ, ಕಂಬಳ ಕ್ರೀಡೆಯಲ್ಲಿ ಹಿಂದೆಂದೂ ಸಾವುನೋವು ಸಂಭವಿಸಿರುವ ಉದಾಹರಣೆ ಇಲ್ಲ ಎಂದರು. 
 
ಜನವರಿ 31ರಂದು ಕಂಬಳ ಕ್ರೀಡೆ ಕುರಿತಾಗಿ ಕೋರ್ಟ್ ಮಧ್ಯಂತರ ತೀರ್ಪು ಪ್ರಕಟಿಸಲಿದೆ. ಒಂದು ವೇಳೆ ಕ್ರೀಡೆ ನಿಷೇಧದ ಪರವಾಗಿ ಆದೇಶ ಬಂದರೆ ತುಳು ಕೂಟದ ವತಿಯಿಂದ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರ ನೀಡಿದರು.
 
ಕಂಬಳ ಕುರಿತಂತೆ ಸುಗ್ರೀವಾಜ್ಞೆ ಹೊರಡಿಸಿ ಶಾಸನ ರೂಪಿಸಬೇಕು ಎಂದು ತುಳು ಕೂಟದ ಅಧ್ಯಕ್ಷ ಜಯರಾಮ ಸೂಡಾ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಸ್ಫೋಟಕ ಹೇಳಿಕೆ

ಮೊಬೈಲ್ ವಾಲ್ಯೂಮ್ ಕಡಿಮೆ ಮಾಡಿ ಎಂದಿದ್ದಕ್ಕೆ ಮಹಿಳೆಯಿಂದ ಪೆಪ್ಪರ್ ಸ್ಪ್ರೇ, Video

ಮುಂದಿನ ಸುದ್ದಿ
Show comments