ಡಾ.ಸುಧೀಂದ್ರ ಹಾಲ್ದೊಡ್ಡೇರಿ ನಿಧನಕ್ಕೆ ಉಪ ಮುಖ್ಯಮಂತ್ರಿ ಕಂಬನಿ

Webdunia
ಶುಕ್ರವಾರ, 2 ಜುಲೈ 2021 (18:12 IST)
ಬೆಂಗಳೂರು: ಖ್ಯಾತ ವಿಜ್ಞಾನಿ, ಅಂಕಣಕಾರ ಡಾ.ಸುಧೀಂದ್ರ ಹಾಲ್ದೊಡ್ಡೇರಿ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಕಂಬನಿ ಮಿಡಿದ್ದಾರೆ. 
 
ವಿಜ್ಞಾನವನ್ನು ಕನ್ನಡಿಗರಿಗೆ ಸರಳವಾಗಿ ಅರ್ಥವಾಗುವ ರೀತಿಯಲ್ಲಿ ಬರೆದ ಸುಧೀಂದ್ರ ಅವರು, ಮಕ್ಕಳಲ್ಲಿ ವಿಜ್ಞಾನದ ಮೇಲಿನ ಪ್ರೇಮ ಹೆಚ್ಚಿಸಿದವರು. ಜತೆಗೆ, ಕರ್ನಾಟಕದಲ್ಲಿ ವಿಜ್ಞಾನದ ಬೆಳವಣಿಗೆಗೆ ಅವರ ಕಾಣಿಕೆ ಬಹಳ ದೊಡ್ಡದು ಎಂದು ಡಿಸಿಎಂ ಶೋಕ ವ್ಯಕ್ತಪಡಿಸಿದ್ದಾರೆ. 
 
ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ  ವಿಜ್ಞಾನಿಯಾಗಿ ಅನುಪಮ ಸೇವೆ ಸಲ್ಲಿಸಿದ್ದ ಅವರು, ಅನೇಕ ಪ್ರಮುಖ ಸಂಶೋಧನೆಗಳಲ್ಲಿ ಭಾಗಿಯಾಗಿದ್ದರು. ತಮ್ಮ ಅನುಭವವನ್ನು ಹೊಸ ತಲೆಮಾರಿನ ಸಂಶೋಧಕರಿಗೆ ಧಾರೆ ಎರೆಯುತ್ತಾ ವಿಜ್ಞಾನಕ್ಕೆ ಬದುಕನ್ನೇ ಅರ್ಪಿಸಿಕೊಂಡಿದ್ದರು ಎಂದು ಡಾ.ಅಶ್ವತ್ಥನಾರಾಯಣ ಗುಣಗಾನ ಮಾಡಿದ್ದಾರೆ. 
 
ಡಾ.ಸುಧೀಂದ್ರ ಹಾಲ್ದೊಡ್ಡೇರಿ ಅವರ ನಿಧನ ಬಹಳ ದುಃಖ ಉಂಟು ಮಾಡಿದೆ. ಅವರಿಗೆ ಭಗವಂತ ಚಿರಶಾಂತಿ ದಯಪಾಲಿಸಲಿ ಹಾಗೂ ಅವರ ಬಂಧುಬಳಗಕ್ಕೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಡಿಸಿಎಂ ಅವರು ಪ್ರಾರ್ಥನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ಚುನಾವಣೆಗೆ ಎಲ್‌ಡಿಎಫ್‌, ಬಿಜೆಪಿ ನಡುವೆ ಒಪ್ಪಂದ: ಪ್ರಿಯಾಂಕಾ ಗಾಂಧಿ

ಕಸ್ಟಡಿಯಲ್ಲಿ ತಂದೆ ಮಗ ಸಾವು, ತಮಿಳುನಾಡಿನ 9ಪೊಲೀಸರಿಗೆ ಮರಣದಂಡನೆ ಶಿಕ್ಷೆ

ದೇಶದ ಅತ್ಯಂತ ಭ್ರಷ್ಟ ಕುಟುಂಬ ಕಾಂಗ್ರೆಸ್‌ನವರು ಇಂದು ಇತರರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ: ಮೋದಿ ಗುಡುಗು

ಸದ್ಯಕ್ಕೆ ಕಚ್ಚಾ ತೈಲದ ಸಮಸ್ಯೆಯಿಲ್ಲ, ಆದರೆ ಆಟೋ ಚಾಲಕರು ಎಲ್‌ಪಿಜಿ ಬದಲು ಪೆಟ್ರೋಲ್ ಬಳಸಿ: ಪ್ರಹ್ಲಾದ್ ಜೋಶಿ

ದೇಶವನ್ನು ಮೋದಿ, ಕೇರಳವನ್ನು ಪಿಣರಾಯಿ ಬಿಟ್ಟು ಮುನ್ನಡೆಸಲು ಬೇರೆಯಾರಿಲ್ಲ ಎಂದು ಭಾವಿಸಿದ್ದಾರೆ: ರಾಹುಲ್ ಕಿಡಿ

ಮುಂದಿನ ಸುದ್ದಿ
Show comments