Webdunia - Bharat's app for daily news and videos

Install App

ಕನಕಪುರ JDS ಟಿಕೆಟ್​ ಬಹುತೇಕ ಫೈನಲ್​​

Webdunia
ಸೋಮವಾರ, 10 ಏಪ್ರಿಲ್ 2023 (19:10 IST)
KPCC ಅಧ್ಯಕ್ಷ D.K. ಶಿವಕುಮಾರ್​​ ಭದ್ರಕೋಟೆಯಾಗಿರುವ ರಾಮನಗರದ ಕನಕಪುರಕ್ಕೆ JDS ಟಿಕೆಟ್ ಬಹುತೇಕ ಫೈನಲ್ ಆಗಿದೆ. ತಾಲ್ಲೂಕು ಅಧ್ಯಕ್ಷ ಹಾಗೂ ಮಾಜಿ ಪುರಸಭಾ ಅಧ್ಯಕ್ಷ ಬಿ.ನಾಗರಾಜುಗೆ JDS ಟಿಕೆಟ್ ಬಹುತೇಕ ಫಿಕ್ಸ್ ಆಗಿದೆ. ಪಕ್ಷದಿಂದ‌ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂಬ ಮಾಹಿತಿ ಪಕ್ಷದ ಉನ್ನತ ಮೂಲಗಳಿಂದ ಲಭ್ಯವಾಗಿದೆ.. ಕಳೆದ‌ ಹಲವು ವರ್ಷಗಳಿಂದ B. ನಾಗರಾಜ್​​ ಕನಕಪುರದಲ್ಲಿ ಪಕ್ಷ ಸಂಘಟನೆ ಮಾಡಿದ್ದಾರೆ.. ಮಾಜಿ ಸಿಎಂ H.D ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಒಮ್ಮತದ‌ ತೀರ್ಮಾನ ಮಾಡಲಾಗಿದೆ ಎಂದು ತಿಳಿದು ಬಂದಿದೆ. JDS ಮುಖಂಡರು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ನಮ್ಮ ಅಭ್ಯರ್ಥಿಗೆ ಮತ ನೀಡಿ‌‌ ಎಂದು ಕ್ಯಾಂಪೇನ್​ ಆರಂಭಿಸಿದ್ದಾರೆ.. ಕನಕಪುರದಲ್ಲಿ ಜೆಡಿಎಸ್ ಪಕ್ಷಕ್ಕೆ 60 ಸಾವಿರಕ್ಕೂ ಹೆಚ್ಚು ಮತಗಳಿವೆ.. ಗೆಲ್ಲಲಾಗದಿದ್ದರೂ ಡಿಕೆಶಿ ಗೆಲುವಿನ ಅಂತರ ಕಡಿಮೆ ಮಾಡೋಕೆ JDS ಪ್ಲ್ಯಾನ್​ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments