Webdunia - Bharat's app for daily news and videos

Install App

ಈಗೇನು ಕನ್ನಡಿಗರಿಗೆ ಮೀಸಲಾತಿ ನೀಡ್ತಿರೋ ಇಲ್ವೋ: ಸರ್ಕಾರಕ್ಕೆ ಗಡುವು ನೀಡಿದ ನಾರಾಯಣ ಗೌಡ

Krishnaveni K
ಶನಿವಾರ, 20 ಜುಲೈ 2024 (16:07 IST)
ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿದೇಯಕ ಮಂಡಿಸಿದ್ದ ರಾಜ್ಯ ಸರ್ಕಾರ ಇಕ್ಕಟ್ಟಿನಲ್ಲಿ ಸಿಲುಕಿದೆ. ಅತ್ತ ಉದ್ಯಮಿಗಳು ಇತ್ತ ಕನ್ನಡ ಹೋರಾಟಗಾರರ ನಡುವೆ ಸರ್ಕಾರ ಅತ್ತ ದರಿ ಇತ್ತ ಪುಲಿ ಎಂಬಂತಾಗಿದೆ.

ಕನ್ನಡಿಗರಿಗೆ ಮೀಸಲಾತಿ ವಿದೇಯಕ ಮಂಡಿಸಿ ಬೀಗಿದ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಉದ್ಯಮಿಗಳಿಂದ ಆಕ್ರೋಶ ಎದುರಾಗಿತ್ತು. ಇದರಿಂದ ಇಲ್ಲಿ ಉದ್ಯಮ ನಡೆಸುವ ಉದ್ದಿಮೆದಾರರಿಗೆ ತೊಂದರೆಯಾಗಲಿದೆ. ಕೌಶಲ್ಯಭರಿತ ಉದ್ಯೋಗಗಳು ಸಿಗಲ್ಲ. ಇಂತಹ ಇಕ್ಕಟ್ಟಿನಲ್ಲಿ ಪರಿಸ್ಥಿತಿಯಲ್ಲಿ ಕರ್ನಾಟಕದಲ್ಲಿ ಹೂಡಿಕೆ ಮಾಡಲು ಸಾಧ್ಯವಿಲ್ಲ ಎಂದಾಗ ಸರ್ಕಾರ ಹಿಂಜರಿಯಿತು.

ಒಂದು ವೇಳೆ ಉದ್ಯಮ ಸಂಸ್ಥೆಗಳು ಕರ್ನಾಟಕದಲ್ಲಿ ಹೂಡಿಕೆ ಮಾಡದೇ ಹೋದರೆ ಅದು ಇಲ್ಲಿನ ಆರ್ಥಿಕತೆ ಮೇಲೆ ಹೊಡೆತ ತರಲಿದೆ. ಹೀಗಾಗಿ ರಾಜ್ಯ ಸರ್ಕಾರ ವಿದೇಯಕಕ್ಕೆ ತಾತ್ಕಾಲಿಕ ತಡೆ ತಂದಿದೆ. ಮುಂದಿನ ದಿನಗಳಲ್ಲಿ ಇನ್ನೊಮ್ಮೆ ಸಚಿವ ಸಂಪುಟದಲ್ಲಿ ಚರ್ಚಿಸಿತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ಆದರೆ ಸರ್ಕಾರ ಈ ವಿದೇಯಕಕ್ಕೆ ತಡೆ ನೀಡುತ್ತಿದ್ದಂತೇ ಇತ್ತ ಕನ್ನಡ ಸಂಘಟನೆಗಳು ರೊಚ್ಚಿಗೆದ್ದಿವೆ. ಕರವೇ ನಾಯಕ ನಾರಾಯಣಗೌಡ ಈಗೇನು ಕನ್ನಡಿಗರಿಗೆ ಮೀಸಲಾತಿ ಜಾರಿಗೆ ತರುತ್ತೀರೋ ಇಲ್ವೋ? ಇಲ್ಲಾಂದ್ರೆ ನಾವು ಕರ್ನಾಟಕ ಬಂದ್ ಗೂ ತಯಾರಿದ್ದೇವೆ. ಇದರ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರ ಯಾವ ಕಾರಣಕ್ಕೂ ಉದ್ಯಮಗಳ ಪ್ರಭಾವಕ್ಕೆ ಒಳಗಾಗಬಾರದು. ಇಲ್ಲಿನ ಕನ್ನಡಿಗರಿಗೆ ಅನ್ಯಾಯ ಮಾಡಬಾರದು. ಅಂತಹ ಸಂದರ್ಭ ಬಂದರೆ ಎಂತಹ ಹೋರಾಟಕ್ಕೂ ನಾವು ಸಿದ್ಧ. ಇದಕ್ಕಾಗಿ ಸರ್ಕಾರಕ್ಕೆ 15 ದಿನದ ಗಡುವು ನೀಡುತ್ತೇವೆ. ಅಷ್ಟರೊಳಗೆ ತೀರ್ಮಾನವಾಗಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments