Webdunia - Bharat's app for daily news and videos

Install App

ಕನ್ನಡಿಗರಿಗೆ ಮೀಸಲಾತಿ ನೀಡಿದ್ದಕ್ಕೆ ಕನ್ನಡ ಸಂಘಟನೆಗಳು ಖುಷ್

Krishnaveni K
ಗುರುವಾರ, 18 ಜುಲೈ 2024 (08:38 IST)
ಬೆಂಗಳೂರು: ಕರ್ನಾಟಕದಲ್ಲಿ ಖಾಸಗಿ ವಲಯದಲ್ಲೂ ಕನ್ನಡಿಗರಿಗೆ ಮೀಸಲಾತಿ ನೀಡುವ ಸರ್ಕಾರದ ನೀತಿಗೆ ಕನ್ನಡ ಸಂಘಟನೆಗಳು ಹರ್ಷ ವ್ಯಕ್ತಪಡಿಸಿವೆ. ಜೊತೆಗೆ ಈ ಸಂಬಂಧ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದೆ.

ಕರ್ನಾಟಕದಲ್ಲಿ ಇನ್ನು ಮುಂದೆ ಖಾಸಗಿ ಸಂಸ್ಥೆಗಳಲ್ಲಿ ಮ್ಯಾನೇಜರ್ ಲೆವೆಲ್ ಹುದ್ದೆಗಳಲ್ಲಿ ಶೇ.50 ಮತ್ತು ಇತರೆ ಹುದ್ದೆಗಳಲ್ಲಿ ಶೇ.75 ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು ಎಂಬ ಹೊಸ ಮಸೂದೆಯನ್ನು ಮೊನ್ನೆಯಷ್ಟೇ ವಿಧಾನಸಭೆಯಲ್ಲಿ ಪಾಸ್ ಮಾಡಲಾಗಿತ್ತು.

ಈ ಮಸೂದೆ ಬಗ್ಗೆ ಈಗ ಪರ-ವಿರೋಧ ಚರ್ಚೆ ಶುರುವಾಗಿದೆ. ಕೆಲವು ಉದ್ಯಮಿಗಳು ಈಗಾಗಲೇ ಈ ನೀತಿಯನ್ನು ಬಹಿರಂಗವಾಗಿಯೇ ವಿರೋಧಿಸಿವೆ. ಇದರಿಂದ ಕೆಲವು ಉದ್ಯಮಗಳು ಕರ್ನಾಟಕದಲ್ಲಿ ಹೂಡಿಕೆ ಮಾಡಲು ಹಿಂದೇಟು ಹಾಕಬಹುದು ಎಂಬ ಮಾತೂ ಕೇಳಿಬರುತ್ತಿವೆ.

ಆದರೆ ಕನ್ನಡಿಗರಿಂದ ಇದಕ್ಕೆ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗುತ್ತಿದೆ. ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕ ಜಾರಿಗೆ ತರುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಕರವೇ ರಾಜ್ಯ ಉಪಾಧ್ಯಕ್ಷರಾದ ಅಶ್ವಿನಿ ಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ರಾಜ್ಯ ಸಂಘಟನಾ ಕಾರ್ಯದರ್ಶಿ ಅಬ್ಬಿಗೆರೆ ವಿನೋದ್ ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments