ಸಾರಿಗೆ ಬಸ್ ನಲ್ಲಿ ಕನ್ನಡ ಡಿಂಡಿಮ

Webdunia
ಶುಕ್ರವಾರ, 1 ನವೆಂಬರ್ 2019 (17:40 IST)
ಚಾಲಕನೊಬ್ಬ ಕನ್ನಡ ಪ್ರೇಮ ಮೆರೆದು ಮಾದರಿಯಾಗಿದ್ದಾನೆ.
 

ಮಂಡ್ಯ ಬಸ್ ಡಿಪೋದ ಕಿಕ್ಕೇರಿ ಮಾರ್ಗದ ಬಸ್ಸಿನಲ್ಲಿ ಕನ್ನಡದ ಡಿಂಡಿಮ ಜೋರಾಗಿದೆ. ಕನ್ನಡ ಪ್ರೇಮ ಮೆರೆದ ಚಾಲಕ- ನಿರ್ವಾಹಕರು ಪ್ರಯಾಣಿಕರ ಸಂತಸಕ್ಕೆ ಕಾರಣವಾಗಿದ್ದಾರೆ.

ಬಸ್ಸನ್ನು ಕನ್ನಡ ಬಾವುಟಗಳು, ಕನ್ನಡ ಸಾಹಿತಿಗಳು ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಭಾವಚಿತ್ರಗಳಿಂದ ಅಲಂಕರಿಸಿದ್ದಾರೆ. ಕನ್ನಡ ದಿನಪತ್ರಿಕೆಗಳನ್ನು 
ಪ್ರಯಾಣಿಕರಿಗೆ ಓದಲು ನೀಡಿ ಕನ್ನಡ ಪ್ರೇಮ ಹಾಗೂ ಹೃದಯಶ್ರೀಮಂತಿಕೆಯನ್ನು ಪ್ರದರ್ಶನ ಮಾಡಿದ್ದಾರೆ.

ಪ್ರಯಾಣಿಕರಿಗೆ ಲಡ್ಡು ಸಿಹಿ ವಿತರಿಸಿ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ಚಾಲಕ ಮುರುಳೀಧರ ಮತ್ತು ನಿರ್ವಾಹಕ ರೇವಣ್ಣ ಅವರು ಕಳೆದ 12 ವರ್ಷಗಳಿಂದ ಬಸ್ಸನ್ನು ಸಿಂಗರಿಸಿಕೊಂಡು ವಿಶೇಷವಾಗಿ ಕನ್ನಡ ರಾಜ್ಯೋತ್ಸವ ಆಚರಿಸುತ್ತಾ ತಾಲ್ಲೂಕಿನ ಜನತೆಯ ಅಭಿಮಾನಕ್ಕೆ ಭಾಜನರಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಮುಂದಿನ ಸುದ್ದಿ
Show comments