Webdunia - Bharat's app for daily news and videos

Install App

ಕನ್ನಡ ರಾಜ್ಯೋತ್ಸವದಂದು ಶಾಲೆಗಳು, ಕಂಪನಿಗಳಲ್ಲಿ ಕನ್ನಡ ಬಾವುಟ ಹಾರಾಟ ಕಡ್ಡಾಯ: ಡಿಕೆಶಿ

Sampriya
ಶುಕ್ರವಾರ, 11 ಅಕ್ಟೋಬರ್ 2024 (15:45 IST)
ಬೆಂಗಳೂರು: ಕನ್ನಡ ರಾಜ್ಯೋತ್ಸವದಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜು, ಕಂಪನಿಗಳು, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ನವೆಂಬರ್‌ 1ರಂದು ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯಾಗಿ ಕನ್ನಡ ಬಾವುಟ ಹಾರಿಸಬೇಕು. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆಚರಣೆ ಮಾಡಿ ನಿಮ್ಮ ಸಂಸ್ಥೆಯಲ್ಲಿ ಏನು ಮಾಡಿದ್ದೀರಿ ಎನ್ನುವುದಕ್ಕೆ ನಾವು ನೀಡುವ ನಂಬರ್‌ಗೆ ಪೋಸ್ಟ್ ಮಾಡಬೇಕು. ಕನ್ನಡ ಭೂಮಿಯಲ್ಲಿ ಕನ್ನಡ ಕಲಿಯಬೇಕಾಗಿರೋದು ಎಲ್ಲರಿಗೂ ಕಡ್ಡಾಯ ಎಂದರು.

ಕನ್ನಡ ಬಾವುಟ ಕಡ್ಡಾಯ ಮಾಡಿದ್ದನ್ನು ಕನ್ನಡ ಸಂಘಟನೆಗಳು ದುರುಪಯೋಗ ಮಾಡಿಕೊಳ್ಳಬಾರದು. ಕಾರ್ಖಾನೆ, ಕಂಪನಿಗಳಿಗೆ ಒತ್ತಡ, ಕಿರುಕುಳ ನೀಡಬಾರದು ಎಂದು ತಾಕೀತು ಮಾಡಿದರು.

 ಕನ್ನಡ ಸಂಘಟನೆಗಳು ಯಾರಿಗೂ ಹೆದರಿಸಬಾರದು. ಹಾಗೆ ಏನಾದರೂ ಒತ್ತಡ ಹೇರಿದರೆ ಅಂತಹ ಸಂಘಟನೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments