ಕನ್ನಡ ಕಾಯಕ ವರ್ಷದ ವಿಶೇಷ ಚಟುವಟಿಕೆಗಳು

Webdunia
ಬುಧವಾರ, 11 ಆಗಸ್ಟ್ 2021 (22:04 IST)
ಕನ್ನಡ ಕಾಯಕ ವರ್ಷದ ವಿಶೇಷ ಚಟುವಟಿಕೆಗಳ ಅಂಗವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಭಾಷಾಂತರ ನಿರ್ದೇಶನಾಲಯ ಹಾಗೂ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸಹಯೋಗದೊಂದಿಗೆ ಆಗಸ್ಟ್ 13, 14 ಮತ್ತು 15 2021ರಂದು ಕನ್ನಡ ಅನುವಾದ ಕಮ್ಮಟ ಹಮ್ಮಿಕೊಳ್ಳಲಾಗಿದೆ.
 
ಆಗಸ್ಟ್ 13, 2021 ಶುಕ್ರವಾರದಂದು ಕನ್ನಡ ಭವನದ ಕನ್ನಡ ಜಗಲಿಯಲ್ಲಿ ಕನ್ನಡ ಅನುವಾದ ಕಮ್ಮಟವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ಉದ್ಘಾಟಿಸಲಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರಾದ ಡಾ.ಸಂತೋಷ ಹಾನಗಲ್ಲ ಅವರು ಪ್ರಾಸ್ತವಿಕ ನುಡಿಗಳನ್ನಾಡಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ರಾಜ್ಯಮಟ್ಟದ ನಾಮನಿರ್ದೇಶಿತ ಸದಸ್ಯ ಪ್ರೊ.ಎಂ.ಅಬ್ದುಲ್ ರೆಹಮಾನ್ ಪಾಷ ಅವರು ಉಪಸ್ಥಿತರಿರಲಿದ್ದಾರೆ.
 
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ರಾಜ್ಯಮಟ್ಟದ ನಾಮನಿರ್ದೇಶಿತ ಸದಸ್ಯ ಪ್ರೊ.ಎಂ.ಅಬ್ದುಲ್ ರೆಹಮಾನ್ ಪಾಷ ಅವರ ಸಂಯೋಜನೆಯಲ್ಲಿ ಈ ಕಮ್ಮಟ ನಡೆಯಲಿದೆ. ಭಾಷಾಂತರ ಇಲಾಖೆಯ ನಿರ್ದೇಕ ಎಂ.ವೆಂಕಟೇಶ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯ ರೋಹಿತ್ ಚಕ್ರತೀರ್ಥ ಹಾಗೂ ಬಿ.ಎಂ.ಶ್ರೀ ಪ್ರತಿಷ್ಠಾನದ ಕಾರ್ಯದರ್ಶಿ ಡಾ.ಬಿ.ಸಿ. ರಾಜಕುಮಾರ್ ಅವರುಗಳು ಕಮ್ಮಟದ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.
 
ಈ ಕಮ್ಮಟ ಆಡಳಿತ, ನ್ಯಾಯಾಂಗ, ಶಿಕ್ಷಣ, ವಾಣಿಜ್ಯ, ವಿಜ್ಞಾನ ಮತ್ತು ತಂತ್ರಜ್ಞಾನ ಈ ರೀತಿ ಸೃಜನೇತರ ಹಾಗೂ ತಾಂತ್ರಿಕ ಸಾಹಿತ್ಯದ ಅನುವಾದದ ಕುರಿತಾಗಿರುತ್ತದೆ. ಈಗಾಗಲೇ ಕನ್ನಡದಲ್ಲಿ ಈ ಕ್ಷೇತ್ರದಲ್ಲಿ ಸಾಕಷ್ಟು ಪರಿಶ್ರಮವಿದ್ದು ಆಯಾ ಕ್ಷೇತ್ರದಲ್ಲಿ ಅನುವಾದವನ್ನು ಕೈಗೊಳ್ಳುವವರಿಗಾಗಿ ಈ ಕಮ್ಮಟ ನಡೆಯಲಿದೆ.
Photo Courtesy: Twitter

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿವಮೊಗ್ಗದಲ್ಲಿ ವಿದ್ಯಾರ್ಥಿ ಮರ್ಡರ್: ಕುಟುಂಬಸ್ಥರಿಗೆ 15 ಲಕ್ಷ ಪರಿಹಾರ, ಯಾರನ್ನೂ ಬಿಡಲ್ಲ ಎಂದ ಸಿಎಂ

ನೇಮಕಾತಿಗಾಗಿ ಪ್ರತಿಭಟನೆ ಮಾಡಿದ್ದ ಯುವಕರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಅಸ್ತಿತ್ವಕ್ಕೆ ಪೆಟ್ಟು ಬಿದ್ದಾಗ ದಲಿತ ಸಿಎಂ ಪ್ರಸ್ತಾಪ: ಪಿ.ರಾಜೀವ್

ಶಿವಮೊಗ್ಗದಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಯನ್ನು ಹತ್ಯೆ ಮಾಡಿದ ಅನ್ಯಕೋಮಿನ ಅಪ್ರಾಪ್ತರು: ಆರ್ ಅಶೋಕ್ ಆಕ್ರೋಶ

ಯುವಜನರ ಕಣ್ಣೀರು, ಹೋರಾಟ ನಿಮಗೆ ಕಾಣುತ್ತಿಲ್ಲವೇ: ವಿಜಯೇಂದ್ರ

ಮುಂದಿನ ಸುದ್ದಿ
Show comments