Webdunia - Bharat's app for daily news and videos

Install App

ಕನ್ನಡ ಭಾಷೆಗೆ ಮೊದಲನೇ ಶತ್ರು ಕಂಗ್ಲೀಶ್: ಅನಂತ್ ಕುಮಾರ್

Webdunia
ಮಂಗಳವಾರ, 1 ನವೆಂಬರ್ 2016 (12:56 IST)
ಕನ್ನಡ ಭಾಷೆ ಅತ್ಯಂತ ಸುಂದರವಾದ ಭಾಷೆಯಾಗಿದೆ.ಕನ್ನಡಿಗರು ಒಣಪ್ರತಿಷ್ಠೆಯನ್ನು ಮರೆತು ಶುದ್ಧವಾದ ಕನ್ನಡ ಭಾಷೆಯಲ್ಲಿ ಮಾತನಾಡಲು ಪ್ರಯತ್ನಿಸಿದಲ್ಲಿ ಕನ್ನಡ ಭಾಷೆ ಬೆಳೆಯಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.
 
ಬಿಜೆಪಿ ಪಕ್ಷದ ಕಚೇರಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸಿದ ನಂತರ ಮಾತನಾಡಿದ ಅವರು, ಕನ್ನಡಾಂಬೆಯ ಪುತ್ರರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ನಾವೇ ಕನ್ನಡ ಭಾಷೆ ಬೆಳೆಯಲು ಅಡ್ಡಿಯಾಗಿದ್ದೇವೆ. ಪ್ರತಿಯೊಂದು ಮಾತಿನಲ್ಲೂ ಇಂಗ್ಲೀಷ್ ಬೆರೆಸುತ್ತೇವೆ. ಹೀಗಾದಲ್ಲಿ ಕನ್ನಡ ಭಾಷೆ ಬೆಳೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
 
ಕನ್ನಡ ವಿಚಾರದಲ್ಲಿ ಸಾಧನೆ ಮಾತಾಡಬೇಕು, ಮಾತಾಡೋದೆ ಸಾಧನೆಯಾಗಬಾರದು ಎಂದು ಸಚಿವ ಅನಂತ್ ಕುಮಾರ್ ಹೇಳಿದರು.
 
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ರಾಜ್ಯ ಸರಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗುತ್ತಿದೆ. ವಿವಾದಾತ್ಮಕವಾಗಿರುವ ಟಿಪ್ಪು ಜಯಂತಿ ಆಚರಣೆ ಬೇಡ ಎಂದು ರಾಜ್ಯದ ಜನತೆ ಬೀದಿಗಳಿದು ಪ್ರತಿಭಟನೆ ನಡೆಸುತ್ತಿದ್ದರೂ ಸಿದ್ದರಾಮಯ್ಯ ಸರಕಾರ ಕ್ಯಾರೆ ಎನ್ನುತ್ತಿಲ್ಲ ಎಂದು ವಿಷಾದಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ ಮನೆಗೆ ಹೊಸ ಅತಿಥಿ ಬರಮಾಡಿಕೊಂಡ ತೇಜಸ್ವಿ ಸೂರ್ಯ ದಂಪತಿ: ವಿಡಿಯೋ

ಸ್ಯಾನಿಟರಿ ಪ್ಯಾಡ್ ನಲ್ಲೂ ರಾಹುಲ್ ಗಾಂಧಿ ಫೋಟೋ: ಟ್ರೋಲ್ ಆದ ಕಾಂಗ್ರೆಸ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಮುಂದಿನ ಸುದ್ದಿ
Show comments