Webdunia - Bharat's app for daily news and videos

Install App

ಒರಾಯನ್ ಮಾಲ್ ತೆರವುಗೊಳಿಸಲು ಕನ್ನಡ ಪರ ಸಂಘಟನೆಗಳ ಪ್ರತಿಭಟನೆ

Webdunia
ಗುರುವಾರ, 18 ಆಗಸ್ಟ್ 2016 (12:29 IST)
ಒರಾಯನ್ ಮಾಲ್ ತೆರವುಗೊಳಿಸಿ ಈ ಜಾಗವನ್ನು ಬಡವರಿಗೆ ನೀಡುವಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
 
ರಾಜಕಾಲುವೆ ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿರುವ ಒರಾಯನ್ ಮಾಲ್ ತೆರವುಗೊಳಿಸುವಂತೆ ಆಗ್ರಹಿಸಿ ಕನ್ನಡ ನವ ನಿರ್ಮಾಣ ಸೇನೆ ಅಧ್ಯಕ್ಷ ಯತಿರಾಜ್ ನಾಯ್ಡು ಹಾಗೂ ಕನ್ನಡ ನವ ನಿರ್ಮಾಣ ವೇದಿಕೆ ಅಧ್ಯಕ್ಷ ನರಸಿಂಹಮೂರ್ತಿ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳು ಪ್ರತಿಭಟನೆ ಕೈಗೊಂಡಿವೆ.
 
ರಾಜಕಾಲುವೆ ಒತ್ತುವರಿಯಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾನಿರತರು ಆಗ್ರಹಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆ ಮೇರೆಗೆ ನಗರದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ, ಬಿಬಿಎಂಪಿ ಅಧಿಕಾರಿಗಳು ಪ್ರಭಾವಿಗಳ ಕಟ್ಟಡಗಳನ್ನು ತೆರುವುಗೊಳಿಸಲು ಹಿಂದೇಟು ಹಾಕುತ್ತಿದ್ದು, ಕೇವಲ ಬಡವರ ಮನೆಗಳನ್ನು ಮಾತ್ರ ತೆರವುಗೊಳಿಸುತ್ತಿದ್ದಾರೆ ಎನ್ನಲಾಗಿದೆ.
 
ನಗರದಲ್ಲಿ ಪ್ರಭಾವಿ ಬಿಲ್ಡರ್‌ಗಳು ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದು, ಐಟಿ ಕಂಪೆನಿ, ಮಾಲ್‌ಗಳು ಹಾಗೂ ಟೆಕ್ ಪಾರ್ಕ್ ನಿರ್ಮಾಣ ಮಾಡಿಕೊಂಡಿದ್ದಾರೆ. ಬಿಬಿಎಂಪಿ ಹಾಗೂ ಸರಕಾರ ಬಡವರಿಗೊಂದು ನ್ಯಾಯ ಬಲ್ಲಿದವರಿಗೊಂದು ನ್ಯಾಯ ಮಾಡುತ್ತಿದೆ ಎಂದು ಬೆಂಗಳೂರಿನ ಜನತೆ ಆರೋಪಿಸುತ್ತಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments