Webdunia - Bharat's app for daily news and videos

Install App

ಕನ್ನಡ ರಾಜ್ಯೋತ್ಸವ: ಇಂದಿನಿಂದ ಸರ್ಕಾರೀ ಅಧಿಕಾರಿಗಳಿಗೆ ಈ ಮಹತ್ವದ ಬದಲಾವಣೆ

Krishnaveni K
ಶುಕ್ರವಾರ, 1 ನವೆಂಬರ್ 2024 (08:47 IST)
ಬೆಂಗಳೂರು: ಇಂದು ನವಂಬರ್ 1 ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಕನ್ನಡ ತಾಯಿಯ ಹಬ್ಬಕ್ಕೆ ರಾಜ್ಯ ಸರ್ಕಾರ ಸರ್ಕಾರೀ ಅಧಿಕಾರಿಗಳಿಗೆ ಹೊಸ ಆದೇಶವೊಂದನ್ನು ಹೊರಡಿಸಿದೆ.

ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಎಲ್ಲಾ ಸರ್ಕಾರೀ ಕಚೇರಿ ಸಿಬ್ಬಂದಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಕಡ್ಡಾಯವಾಗಿ ಕನ್ನಡ ಬಾವುಟದ ಟ್ಯಾಗ್ ಇರುವ ಐಡಿ ಕಾರ್ಡ್ ಬಳಕೆ ಮಾಡಲೇಬೇಕೆಂದು ಕಡ್ಡಾಯಗೊಳಿಸಿ ಆದೇಶ ನೀಡಿದ್ದಾರೆ.

ಸರ್ಕಾರೀ ಕಚೇರಿಯ ಎಲ್ಲಾ ಅಧಿಕಾರಿಗಳೂ ಕನ್ನಡ ರಾಜ್ಯೋತ್ಸವದೊಳಗಾಗಿ ಕಡ್ಡಾಯವಾಗಿ ತಮ್ಮ ಗುರುತಿನ ಚೀಟಿಗೆ ಕನ್ನಡ ಬಾವುಟದ ಬಣ್ಣವಾದ ಹಳದಿ-ಕೆಂಪು ಟ್ಯಾಗ್ ನ್ನೇ ಬಳಸಬೇಕು ಎಂದು ಆದೇಶ ಹೊರಡಿಸಲಾಗಿದೆ. ಈ ಮೂಲಕ ಕನ್ನಡಕ್ಕೆ ಗೌರವ ಸಲ್ಲಿಸಲು ಮುಂದಾಗಿದೆ. ಈ ಬಗ್ಗೆ ಈಗಾಗಲೇ ಎಲ್ಲಾ ಇಲಾಖೆಯ ಡಿಪಿಎಆರ್ ಗೆ ಸೂಚನೆ ನೀಡಲಾಗಿದೆ.

ಇದಲ್ಲದೆ, ಇಂದು ಕರ್ನಾಟಕದ ಎಲ್ಲಾ ಕಚೇರಿ, ಶಾಲೆ, ಕಾಲೇಜುಗಳು, ವಾಣಿಜ್ಯ ಮಳಿಗೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಲು ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಸಾಕಷ್ಟು ಹೊರ ರಾಜ್ಯದ, ದೇಶದ ಕಂಪನಿಗಳೂ ಇವೆ. ಆದರೆ ಇವುಗಳೂ ಇಂದು ಕನ್ನಡ ಬಾವುಟ ಹಾರಿಸಿ ಕನ್ನಡಾಂಬೆಗೆ ಗೌರವ ನೀಡಲು ಸೂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments