ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

Sampriya
ಗುರುವಾರ, 30 ಅಕ್ಟೋಬರ್ 2025 (19:38 IST)
Photo Credit X
ಬೆಂಗಳೂರು: 2025 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಅಧಿಕೃತ ಪಟ್ಟಿ ಪ್ರಕಟವಾಗಿದ್ದು, ಒಟ್ಟು 70 ಮಂದಿಯನ್ನು ಆಯ್ಕೆ ಮಾಡಲಾಗಿದೆ.

ಸಿನಿಮಾ ನಟ ಪ್ರಕಾಶ್‌ ರಾಜ್‌ ಸೇರಿದಂತೆ ವಿವಿಧ ವಲಯಗಳಲ್ಲಿ ಸಾಧನೆಗೈದ ಅರ್ಹರಿಗೆ ಗೌರವ ನೀಡಲಾಗುತ್ತಿದೆ. 

ವಿಧಾನಸೌಧದಲ್ಲಿ ಸಚಿವ ಶಿವರಾಜ್ ತಂಗಡಗಿ ಪ್ರತಿಕ್ರಿಯಿಸಿ, ವಿವಿಧ ವಲಯಗಳ ಅರ್ಹರಿಗೆ ನಾಡಿನ ಅತ್ಯುನ್ನತ ಗೌರವ ನೀಡಲಾಗುತ್ತಿದೆ.  ಜಿಲ್ಲಾವಾರು, ಸಾಮಾಜಿಕ ಪರಿಪಾಲನೆಯಡಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು.‌

ಆಯ್ಕೆ ಸಲಹಾ ಸಮಿತಿ ಸದಸ್ಯರು ಶಿಫಾರಸ್ಸು ಮಾಡಿದ್ದವರನ್ನು ಬಹುತೇಕ‌‌ ಆಯ್ಕೆ ಮಾಡಲಾಗಿದೆ. ನಾಲ್ಕೈದು‌ ಬಾರಿ‌ ಸಭೆ ನಡೆಸಿದ ಸದಸ್ಯರು ಅರ್ಹರನ್ನು ‌ಆಯ್ಕೆ ಮಾಡಲು ಸಹಕರಿಸಿದ್ದಾರೆ ಎಂದರು.

ಇತಿಹಾಸದಲ್ಲೇ ಮೊದಲ ಬಾರಿಗೆ ಸಮಗಾರ ಹರಳಯ್ಯ ಸಮುದಾಯಕ್ಕೆ ಸೇರಿದ ಇಬ್ಬರು ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 

ಪ್ರಶಸ್ತಿ ವಿವರ ಹೀಗಿದೆ: 
ಪ್ರಶಸ್ತಿಯು 25 ಗ್ರಾಂ ಚಿನ್ನದ ಪದಕ ಹಾಗೂ ಐದು ಲಕ್ಷ ರೂ. ನಗದನ್ನು ಒಳಗೊಂಡಿದೆ. ನವೆಂಬರ್ 1 ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಜೆ 6 ಗಂಟೆಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಚಲನಚಿತ್ರ /ಕಿರುತೆರೆ

    ಪ್ರಕಾಶ್ ರಾಜ್ - ದಕ್ಷಿಣ ಕನ್ನಡ
    ವಿಜಯಲಕ್ಷ್ಮೀ ಸಿಂಗ್ -ಕೊಡಗು

ಆಡಳಿತ/ ವೈದ್ಯಕೀಯ

    ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ) - ಬೆಂಗಳೂರು ದಕ್ಷಿಣ (ರಾಮನಗರ)
    ಡಾ. ಆಲಮ್ಮ ಮಾರಣ್ಣ - ತುಮಕೂರು
    ಡಾ. ಜಯರಂಗನಾಥ್ - ಬೆಂಗಳೂರು ಗ್ರಾಮಾಂತರ

ಸಾಹಿತ್ಯ ಕ್ಷೇತ್ರ

    ಪ್ರೊ. ರಾಜೇಂದ್ರ ಚೆನ್ನಿ - ಶಿವಮೊಗ್ಗ
    ತುಂಬಾಡಿ ರಾಮಯ್ಯ - ತುಮಕೂರು
    ಪ್ರೊ ಅರ್ ಸುನಂದಮ್ಮ - ಚಿಕ್ಕಬಳ್ಳಾಪುರ
    ಡಾ.ಎಚ್.ಎಲ್ ಪುಷ್ಪ - ತುಮಕೂರು
    ರಹಮತ್ ತರೀಕೆರೆ - ಚಿಕ್ಕಮಗಳೂರು
    ಹ.ಮ. ಪೂಜಾರ - ವಿಜಯಪುರ

ಸಂಗೀತ/ ನೃತ್ಯ ಕ್ಷೇತ್ರ

    ದೇವೆಂದ್ರಕುಮಾರ ಪತ್ತಾರ್ - ಕೊಪ್ಪಳ
    ಮಡಿವಾಳಯ್ಯ ಸಾಲಿ - ಬೀದರ್
    ಪ್ರೊ. ಕೆ. ರಾಮಮೂರ್ತಿ ರಾವ್ - ಮೈಸೂರು

ಜಾನಪದ

    ಬಸಪ್ಪ ಭರಮಪ್ಪ ಚೌಡ್ಕಿ - ಕೊಪ್ಪಳ
    ಬಿ. ಟಾಕಪ್ಪ ಕಣ್ಣೂರು - ಶಿವಮೊಗ್ಗ
    ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ - ಬೆಳಗಾವಿ
    ಹನುಮಂತಪ್ಪ, ಮಾರಪ್ಪ, ಚೀಳಂಗಿ - ಚಿತ್ರದುರ್ಗ
    ಎಂ. ತೋಪಣ್ಣ - ಕೋಲಾರ
    ಸೋಮಣ್ಣ ದುಂಡಪ್ಪ ಧನಗೊಂಡ - ವಿಜಯಪುರ
    ಸಿಂಧು ಗುಜರನ್‌ - ದಕ್ಷಿಣ ಕನ್ನಡ
    ಎಲ್. ಮಹದೇವಪ್ಪ ಉಡಿಗಾಲ - ಮೈಸೂರು

ಸಮಾಜ ಸೇವೆ

    ಸೂಲಗಿತ್ತಿ ಈರಮ್ಮ - ವಿಜಯನಗರ
    ಫಕ್ಕೀರಿ - ಬೆಂಗಳೂರು ಗ್ರಾಮಾಂತರ
    ಕೋರಿನ್ ಆಂಟೊನಿಯಟ್ ರಸ್ಕೀನಾ - ದಕ್ಷಿಣ ಕನ್ನಡ
    ಡಾ. ಎನ್. ಸೀತಾರಾಮ ಶೆಟ್ಟಿ - ಉಡುಪಿ
    ಕೋಣಂದೂರು ಲಿಂಗಪ್ಪ - ಶಿವಮೊಗ್ಗ


ಸಂಕೀರ್ಣ

    ಉಮೇಶ ಪಂಬದ - ದಕ್ಷಿಣ ಕನ್ನಡ
    ಡಾ. ರವೀಂದ್ರ ಕೋರಿಶೆಟ್ಟಿರ್ - ಧಾರವಾಡ
    ಕೆ.ದಿನೇಶ್ - ಬೆಂಗಳೂರು
    ಶಾಂತರಾಜು - ತುಮಕೂರು
    ಜಾಫರ್ ಮೊಹಿಯುದ್ದೀನ್ - ರಾಯಚೂರು
    ಪೆನ್ನ ಓಬಳಯ್ಯ - ಬೆಂಗಳೂರು ಗ್ರಾಮಾಂತರ
    ಶಾಂತಿ ಬಾಯಿ - ಬಳ್ಳಾರಿ
    ಪುಂಡಲೀಕ ಶಾಸ್ತ್ರೀ(ಬುಡಬುಡಕೆ) - ಬೆಳಗಾವಿ


ಹೊರನಾಡು/ ಹೊರದೇಶ

    ಜಕರಿಯ ಬಜಪೆ (ಸೌದಿ)
    ಪಿ ವಿ ಶೆಟ್ಟಿ (ಮುಂಬೈ)


ಪರಿಸರ

    ರಾಮೇಗೌಡ - ಚಾಮರಾಜನಗರ
    ಮಲ್ಲಿಕಾರ್ಜುನ ನಿಂಗಪ್ಪ - ಯಾದಗಿರಿ


ಕೃಷಿ

    ಡಾ.ಎಸ್.ವಿ.ಹಿತ್ತಲಮನಿ - ಹಾವೇರಿ
    ಎಂ ಸಿ ರಂಗಸ್ವಾಮಿ - ಹಾಸನ


ಮಾಧ್ಯಮ ಕ್ಷೇತ್ರ

    ಕೆ.ಸುಬ್ರಮಣ್ಯ - ಬೆಂಗಳೂರು
    ಅಂಶಿ ಪ್ರಸನ್ನಕುಮಾರ್ - ಮೈಸೂರು
    ಬಿ.ಎಂ ಹನೀಫ್ - ದಕ್ಷಿಣ ಕನ್ನಡ
    ಎಂ ಸಿದ್ಧರಾಜು - ಮಂಡ್ಯ


ವಿಜ್ಞಾನ ತಂತ್ರಜ್ಞಾನ

    ರಾಮಯ್ಯ - ಚಿಕ್ಕಬಳ್ಳಾಪುರ
    ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ್ - ದಾವಣಗೆರೆ
    ಡಾ. ಆರ್. ವಿ ನಾಡಗೌಡ - ಗದಗ


ಸಹಕಾರ

    ಶೇಖರಗೌಡ ವಿ ಮಾಲಿಪಾಟೀಲ್ - ಕೊಪ್ಪಳ


ಯಕ್ಷಗಾನ/ ಬಯಲಾಟ/ ರಂಗಭೂಮಿ

    ಕೋಟ ಸುರೇಶ ಬಂಗೇರ- ಉಡುಪಿ
    ಐರಬೈಲ್‌ಆನಂದ ಶೆಟ್ಟಿ - ಉಡುಪಿ
    ಕೃಷ್ಣ ಪರಮೇಶ್ವರ ಹೆಗಡೆ (ಕೆ.ಪಿ ಹೆಗಡೆ) - ಉತ್ತರ ಕನ್ನಡ
    ಗುಂಡೂರಾಜ್ - ಹಾಸನ
    ಹೆಚ್.ಎಂ. ಪರಮಶಿವಯ್ಯ - ಬೆಂಗಳೂರು ದಕ್ಷಿಣ (ರಾಮನಗರ)
    ಎಲ್.ಬಿ.ಶೇಖ್ (ಮಾಸ್ತರ್) - ವಿಜಯಪುರ
    ಬಂಗಾರಪ್ಪ ಖುದಾನ್‌ಪುರ - ಬೆಂಗಳೂರು
    ಮೈಮ್ ರಮೇಶ್ - ದಕ್ಷಿಣ ಕನ್ನಡ
    ಡಿ.ರತ್ನಮ್ಮ ದೇಸಾಯಿ - ರಾಯಚೂರು


ಶಿಕ್ಷಣ ಕ್ಷೇತ್ರ

    ಡಾ. ಎಂ.ಆರ್. ಜಯರಾಮ್ - ಬೆಂಗಳೂರು
    ಡಾ. ಎನ್ ಎಸ್ ರಾಮೇಗೌಡ -ಮೈಸೂರು
    ಎಸ್. ಬಿ. ಹೊಸಮನಿ - ಕಲಬುರಗಿ
    ನಾಗರಾಜು - ಬೆಳಗಾವಿ


ಕ್ರೀಡೆ

    ಆಶೀಶ್ ಕುಮಾರ್ ಬಲ್ಲಾಳ್ - ಬೆಂಗಳೂರು
    ಎಂ ಯೋಗೇಂದ್ರ - ಮೈಸೂರು
    ಡಾ. ಬಬಿನಾ ಎನ್.ಎಂ (ಯೋಗ) - ಕೊಡಗು


ನ್ಯಾಯಾಂಗ

    ನ್ಯಾ. ಪಿ.ಬಿ. ಭಜಂತ್ರಿ (ಪವನ್ಕುಮಾರ್ ಭಜಂತ್ರಿ ) - ಬಾಗಲಕೋಟೆ


ಶಿಲ್ಪಕಲೆ/ ಚಿತ್ರಕಲೆ/ ಕರಕುಶಲ

    ಬಸಣ್ಣ ಮೋನಪ್ಪ ಬಡಿಗೇರ - ಯಾದಗಿರಿ
    ನಾಗಲಿಂಗಪ್ಪ ಜಿ ಗಂಗೂರ - ಬಾಗಲಕೋಟೆ
    ಬಿ. ಮಾರುತಿ - ವಿಜಯನಗರ
    ಎಲ್. ಹೇಮಾಶೇಖರ್ - ಮೈಸೂರು<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥರೈಟಿಸ್ ಬರದಂತೆ ತಡೆಯಲು ಈ ಮೂರು ಕೆಲಸ ತಪ್ಪದೇ ಮಾಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕನ್ನಡಕ್ಕಿಂತ ಪರಭಾಷೆಗಳಲ್ಲೇ ಇರುವ ಪ್ರಕಾಶ್ ರಾಜ್ ಗೆ ಯಾಕೆ ರಾಜ್ಯೋತ್ಸವ ಪ್ರಶಸ್ತಿ: ನೆಟ್ಟಿಗರ ತರಾಟೆ

ಮುಟ್ಟಾಗಿದ್ದು ನಿಜಾನಾ ಎಂದು ಮಹಿಳೆಯರ ಬಟ್ಟೆ ಬಿಚ್ಚಲು ಹೇಳಿದ ಮೇಲ್ವಿಚಾರಕ

ಕೋರ್ಟ್ ಹೇಳಿದ್ರೂ ಬೆಲೆಯಿಲ್ವಾ: ಪ್ರಿಯಾಂಕ್ ಖರ್ಗೆ ವಿರುದ್ಧ ನೆಟ್ಟಿಗರು ಕಿಡಿ

ಮುಂದಿನ ಸುದ್ದಿ
Show comments