ಕನ್ನಡ ರಾಜ್ಯಭಾಷೆ, ಹಿಂದಿ ರಾಷ್ಟ್ರಭಾಷೆ: ಮುರಗೇಶ್‌ ನಿರಾಣಿ

Webdunia
ಗುರುವಾರ, 28 ಏಪ್ರಿಲ್ 2022 (16:14 IST)
ಹಿಂದಿ ಭಾಷೆ ರಾಷ್ಟ್ರಭಾಷೆಯೇ ಎಂಬ ಬಗ್ಗೆ ರಾಜ್ಯ ಸೇರಿದಂತೆ ನೆರೆಯ ರಾಜ್ಯಗಳಿಂದಲೂ ಬೆಂಬಲ ವ್ಯಕ್ತವಾಗಿರುವ ನಡುವೆ ಕರ್ನಾಟಕದಲ್ಲಿ ಸಚಿವ ಸ್ಥಾನ ಅಲಂಕರಿಸಿರುವ ಬಿಜೆಪಿಯ ಮುರುಗೇಶ್‌ ನಿರಾಣಿ ಉಲ್ಟಾ ಹೇಳಿಕೆ ನೀಡಿ ಅಚ್ಚರಿ ಮತ್ತು ಆಘಾತ ವ್ಯಕ್ತಪಡಿಸಿದ್ದಾರೆ.
ಸುದೀಪ್‌ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಎಚ್.ಡಿ.ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಬೆಂಬಲ ವ್ಯಕ್ತಪಡಿಸಿದ್ದು, ಹಿಂದಿ ರಾಷ್ಟ್ರ ಭಾಷೆ ಅಲ್ಲ. ಎಲ್ಲಾ ಭಾಷೆಗಳಿಗೂ ಸಮಾನ ಸ್ಥಾನವಿದೆ ಎಂದು ಹೇಳಿದ್ದರು.
ಸಂಪುಟದ ಪ್ರಭಾವಿ ಸಚಿವರಲ್ಲಿ ಒಬ್ಬರಾದ ಮುರುಗೇಶ್‌ ನಿರಾಣಿ, ಕನ್ನಡ ಪ್ರಾದೇಶಿಕ ಭಾಷೆ, ಹಿಂದಿ ರಾಷ್ಟ್ರೀಯ ಭಾಷೆ ಎಂದು ಹೇಳುವ ಮೂಲಕ ಮತ್ತೆ ವಿತಂಡ ವಾದ ಮುಂದಿಟ್ಟಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಮುರುಗೇಶ್ ನಿರಾಣಿ, ಕನ್ನಡ ಪ್ರಾದೇಶಿಕ ಭಾಷೆ, ಹಿಂದಿ ರಾಷ್ಟ್ರೀಯ ಭಾಷೆ. ಹಿಂದಿ ಭಾಷೆಯೂ ನಮಗೆ ಬೇಕು. ಬೇರೆ ಭಾಷೆ ಕಲಿಯುವುದರಲ್ಲಿ ತಪ್ಪೇನಿಲ್ಲ. ಹಿಂದಿಯನ್ನು ರಾಷ್ಟ್ರೀಯ ಭಾಷೆಯನ್ನಾಗಿ ಮಾಡಬೇಕು ಎಂಬುದು ಮೊದಲಿನಿಂದಲೂ ಇದೆ, ಇದರಿಂದ ತಪ್ಪೇನಿಲ್ಲ. ಹೆಚ್ಚು ಭಾಷೆ ಕಲಿಯೋದ್ರಿಂದ ನಾವು ಶ್ರೀಮಂತರಾಗ್ತಿವಿ. ನಾವು ಕನ್ನಡಿಗರು, ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು. ಆ ಬಳಿಕ ಬೇರೆ ಬೇರೆ ಭಾಷೆಗಳನ್ನು ಕಲಿಯಬೇಕು. ನಾನು ಗ್ರಾಮೀಣ ಪ್ರದೇಶದವನಾಗಿರುವುದರಿಂದ ಕನ್ನಡವನ್ನ ಪ್ರೀತಿಸುತ್ತೇನೆ. ಇತರ ಭಾಷೆಗಳನ್ನೂ ಪ್ರೀತಿಸುತ್ತೇನೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments