Webdunia - Bharat's app for daily news and videos

Install App

ಫೋನ್ ಪೇ ಬಹಿಷ್ಕರಿಸಲು ಶುರು ಮಾಡಿದ ಕನ್ನಡಿಗರು: ಕಾರಣ ಇಷ್ಟೇ

Krishnaveni K
ಶನಿವಾರ, 20 ಜುಲೈ 2024 (09:05 IST)
ಬೆಂಗಳೂರು: ಕಳೆದ ಎರಡು ದಿನಗಳಿಂದ ಕನ್ನಡಿಗರು ಹಣ ಟ್ರಾನ್ಸ್ ಫರ್ ಮಾಡುವ ಜನಪ್ರಿಯ ಫೋನ್ ಪೇ ಆಪ್ ನ್ನು ಬಹಿಷ್ಕರಿಸಲು ಶುರು ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಇಂತಹದ್ದೊಂದು ಟ್ರೆಂಡ್ ಶುರುವಾಗಿದೆ.

ಇದಕ್ಕೆ ಕಾರಣ ಇತ್ತೀಚೆಗೆ ಫೋನ್ ಪೇ ಸಂಸ್ಥಾಪಕ ನೀಡಿದ ಒಂದು ಹೇಳಿಕೆ. ಅಷ್ಟಕ್ಕೂ ಆಗಿದ್ದೇನು ಇಲ್ಲಿ ನೋಡಿ. ಇತ್ತೀಚೆಗೆ ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಖಾಸಗಿ ವಲಯದಲ್ಲಿ ಕನ್ನಡಿಗೆ ಉದ್ಯೋಗ ಮೀಸಲಾಯಿ ಮಸೂದೆ ಪಾಸ್ ಮಾಡಿತ್ತು. ಇದರ ವಿರುದ್ಧ ಫೋನ್ ಪೇ ಸಂಸ್ಥಾಪಕ ಸಮೀರ್ ನಿಗಮ್ ಟ್ವೀಟ್ ಮಾಡಿದ್ದರು.

ಇಂತಹದ್ದೊಂದು ಮೀಸಲಾತಿ ತಂದರೆ ನನ್ನ ಮಕ್ಕಳಿಗೆ ಕರ್ನಾಟಕದಲ್ಲಿ ಕೆಲಸ ಮಾಡುವ ಯೋಗ್ಯತೆಯೇ ಇರಲ್ವಾ. ಇಂತಹದ್ದೊಂದು ಮೀಸಲಾತಿ ನಿಯಮ ಜಾರಿಗೆ ತಂದ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಸಮೀರ್ ಟೀಕಾ ಪ್ರಹಾರ ನಡೆಸಿದ್ದರು. ಇದು ಕನ್ನಡಿಗರನ್ನು ಕೆರಳಿಸಿದೆ.

ಇದೇ ಕಾರಣಕ್ಕೆ ಕೆಲವರು ಫೋನ್ ಪೇ ಆಪ್ ನ್ನು ತಮ್ಮ ಫೋನ್ ನಿಂದ ಅನ್ ಇನ್ ಸ್ಟಾಲ್ ಮಾಡುವ ಮೂಲಕ ಬಹಿಷ್ಕಾರದ ಅಭಿಯಾನಕ್ಕೆ ಕೈಜೋಡಿಸುತ್ತಿದ್ದಾರೆ. ಕನ್ನಡಿಗರ ಮೀಸಲಾತಿಯನ್ನು ವಿರೋಧಿಸಿದ ನಿಮ್ಮ ಆಪ್ ಕೂಡಾ ನಮ್ಮ ಫೋನ್ ನಲ್ಲಿ ಬೇಡ ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಸಮೇತ ಬಹಿಷ್ಕಾರ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments