ಸಿದ್ದರಾಮಯ್ಯ ವಿರುದ್ಧ ಕಾರಜೋಳ ವಾಗ್ದಾಳಿ

Webdunia
ಭಾನುವಾರ, 18 ಡಿಸೆಂಬರ್ 2022 (19:09 IST)
ಮಹಾರಾಷ್ಟ್ರ-ಕರ್ನಾಟಕ ರಾಜ್ಯಗಳ ನಡುವೆ ಗಡಿ ವಿವಾದ ಸಂಬಂಧ ಬೊಮ್ಮಾಯಿ ವೀಕ್ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಗೋವಿಂದ ಕಾರಜೋಳ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಅವನೇ 5 ವರ್ಷ ಇದ್ದನಲ್ಲ ಏನು ಮಾಡುತ್ತಿದ್ದ. ಯಾಕೆ ಆಗ ಗಡಿ ಸಮಸ್ಯೆ ಸರಿಪಡಿಸಲಿಲ್ಲ. ಸುಮ್ಮನೆ ಬಾಯಿ ಚಪಲಕ್ಕೆ ಏನೇನೋ ಮಾತನಾಡಬಾರದು. 60 ವರ್ಷ ಆಡಳಿತದಲ್ಲಿದ್ದ ಕಾಂಗ್ರೆಸ್ ಸಮಸ್ಯೆ ಸರಿಪಡಿಸಬಹುದಿತ್ತು. ಅಂದಿನ ಕಾಂಗ್ರೆಸ್ ತ್ರಿಬಲ್ ಇಂಜಿನ್ ಸರ್ಕಾರ ಯಾಕೆ ಮಾಡಲಿಲ್ಲ. ಸಮಸ್ಯೆ ಬಗೆಹರಿಸಬೇಡಿ ಎಂದು ಯಾರಾದರೂ ಆಣೆ ಹಾಕಿದ್ದರಾ? ಎಂದು ಮಾಡಿದ್ದಾರೆ. ಇನ್ನೂ ಬೆಳಗಾವಿ ಅಧಿವೇಶನಕ್ಕೆ ಪ್ರತಿಭಟನೆ ಬಿಸಿ ವಿಚಾರವಾಗಿ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಉದ್ದೇಶ ಈಡೇರೋದರಲ್ಲಿ ಸ್ವಲ್ಪ ಹೆಚ್ಚು-ಕಡಿಮೆ ಆಗ್ತಿದೆ. ಉತ್ತರ ಕರ್ನಾಟಕದ ಶಾಸಕರು ಏನೇನು ಚರ್ಚೆ ಆಗಬೇಕು ಅದರ ಬಗ್ಗೆ ಇಲಾಖೆವಾರು ಒಂದೊಂದಾಗಿ ಚರ್ಚೆ ಮಾಡಿದ್ರೆ ಹೆಚ್ಚು ಅರ್ಥಪೂರ್ಣವಾಗುತ್ತೆ. ಸರ್ಕಾರದ ಗಮನ ಸೆಳೆಯಬಹುದು, ಸಾರ್ವಜನಿಕರಿಗೂ ಗೊತ್ತಾಗುತ್ತೆ. ಅದರ ಬಗ್ಗೆ ಒತ್ತು ಕೊಡುವ ಕೆಲಸ ಆಗಬೇಕು. ಉತ್ತರ ಕರ್ನಾಟಕದಲ್ಲಿ ಸರಕಾರಿ ಶಾಲೆಗಳು ಕಡಿಮೆ ಇರೋ ಬಗ್ಗೆ ಚರ್ಚೆ ಆಗಬೇಕು ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments