Webdunia - Bharat's app for daily news and videos

Install App

ಕರಂದ್ಲಾಜೆ, ಪ್ರತಾಪ್ ಸಿಂಹರಿಂದ ನನ್ನ ಪತ್ನಿ, ಕುಟುಂಬದ ವಿರುದ್ಧ ಹೇಳಿಕೆ: ದಿನೇಶ್ ಗುಂಡೂರಾವ್

Webdunia
ಸೋಮವಾರ, 4 ಡಿಸೆಂಬರ್ 2017 (14:27 IST)
ಬಿಜೆಪಿ ಸಂಸರು ಮನಬಂದಂತೆ ಅಸಭ್ಯ ಹೇಳಿಕೆ ನೀಡುವವರಿಗೆ ಏನೆಂದು ಪ್ರತಿಕ್ರಿಯೆ ನೀಡುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಬೇಸರ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ನನ್ನ ಪತ್ನಿಯ ಜಾತಿಯ ವಿರುದ್ಧ ಹೇಳಿಕೆ ನೀಡಿದ್ದರು. ಇದೀಗ ಸಂಸದ ಪ್ರತಾಪ್ ಸಿಂಹ ನನ್ನ ಕುಟುಂಬದ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
 
ರಾಜಕಾರಣದಲ್ಲಿ ವೈಯಕ್ತಿಕ ವಿಷಯಗಳನ್ನು ಬೆರೆಸುವುದು ಸರಿಯಲ್ಲ. ಕೇವಲ ಪ್ರಚಾರಕ್ಕಾಗಿ ಮನಬಂದಂತೆ ಹೇಳಿಕೆ ನೀಡುವುದು ಯಾವುದೇ ರಾಜಕೀಯ ನಾಯಕನಿಗೆ ಶೋಭೆ ತರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ನಾನು ಕೂಡಾ ಬಿಜೆಪಿ ನಾಯಕರ ಬಗ್ಗೆ ಅಸಭ್ಯ ಹೇಳಿಕೆಗಳನ್ನು ನೀಡಬಹುದು. ಆದರೆ, ನಾನು ಅಂತಹ ಕೀಳುಮಟ್ಟಕ್ಕೆ ಹೋಗುವವನಲ್ಲ. ರಾಜಕೀಯಕ್ಕೆ ತನ್ನದೇ ಆದ ಪಾವಿತ್ರ್ಯತೆಯಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments