Webdunia - Bharat's app for daily news and videos

Install App

ಕರೀಂ ಲಾಲಾ ತೆಲಗಿ ಅಳಿಯನ ಜೊತೆಗೆ ಮಾರಾಮಾರಿ

Webdunia
ಸೋಮವಾರ, 28 ಅಕ್ಟೋಬರ್ 2019 (18:07 IST)
ಛಾಪಾಕಾಗದ ಹಗರಣದ ಆರೋಪಿ ಕರೀಂ ಲಾಲಾ ತೆಲಗಿಯ ಅಳಿಯ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರೊಬ್ಬರ ನಡುವೆ ಮಾರಾಮಾರಿ ನಡೆದಿದೆ.

ತೆಲಗಿ ಅಳಿಯ ಖಾನಾಪೂರ ತಾಲೂಕಾ ಯುಥ್ ಕಾಂಗ್ರೆಸ್ ಅಧ್ಯಕ್ಷ ಇರ್ಫಾನ್ ತಾಳಿಕೋಟಿ ಮತ್ತು ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯ ರಫೀಕ್ ವಾರಿಮನಿ  ನಡುವೆ ಮಾರಾಮಾರಿ ನಡೆದಿದೆ.

ಖಾನಾಪೂರ ಪಟ್ಟಣದಲ್ಲಿ ಬಹುಕೋಟಿ ಛಾಪಾಕಾಗದ ಹಗರಣದ ಆರೋಪಿ ಕರೀಂ ಲಾಲಾ ತೆಲಗಿಯ ಅಳಿಯ ಮತ್ತು ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯ ರಫೀಕ್ ವಾರಿಮನಿ ಇವರ ನಡುವೆ ನಡು ರಸ್ತೆಯಲ್ಲಿ  ಮಾರಾಮಾರಿ ಜರುಗಿದೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಇದಕ್ಕೆ ಸಂಬಂಧಿಸಿದಂತೆ ಈ ಇಬ್ಬರೂ ಒಬ್ಬರ ಮೇಲೊಬ್ಬರು ಹೊಡೆದಾಡುವುದು ಮತ್ತು ಇರ್ಫಾನ್ ತಾಳಿಕೋಟಿ ಇವರಿಗೆ ಇನ್ನೂ ಕೆಲವರು ಮನಬಂದಂತೆ ಥಳಿಸಿರುವ ವಿಡಿಯೋಗಳು ಈಗ ವೈರಲ್ ಆಗಿವೆ. ಇಬ್ಬರೂ ಕೂಡಾ ಪ್ರಥಮ ಚಿಕಿತ್ಸೆ ಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇರ್ಫಾನ್ ತಾಳಿಕೋಟಿ ಪತ್ನಿ ಖಾನಾಪೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ತಿಳಿದು ಬಂದಿದೆ. ಇದಕ್ಕೆ ಪ್ರತಿಯಾಗಿ ರಫೀಕ್ ವಾರಿಮನಿ ಕೂಡಾ ತಮ್ಮ ಪರವಾಗಿ ದೂರು ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಈ ಘಟನೆಗೆ ಮುಖ್ಯಕಾರಣ ತಿಳಿದು ಬಂದಿಲ್ಲ. ಆದರೆ ದೀಪಾವಳಿಯ ಹಬ್ಬದ ಸಂದರ್ಭದಲ್ಲಿ ಈ ಘಟನೆಯಂತೂ ಸಾರ್ವಜನಿಕರಿಗೆ ಆತಂಕದ ಜೊತೆ ಸ್ಪಲ್ಪ ಮನರಂಜನೆ ಕೂಡಾ ನೀಡಿದೆ. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments