Webdunia - Bharat's app for daily news and videos

Install App

Karnataka Weather: ರಾಜ್ಯದಲ್ಲಿ ಇಂದು ಯಾವ ಜಿಲ್ಲೆಗಳಿಗೆ ಮಳೆಯ ಸೂಚನೆ ಇಲ್ಲಿದೆ ವಿವರ

Krishnaveni K
ಬುಧವಾರ, 12 ಮಾರ್ಚ್ 2025 (08:47 IST)
ಬೆಂಗಳೂರು: ಕರ್ನಾಟಕದಲ್ಲಿ ಸತತ ಬಿಸಿಲಿನಿಂದ ತತ್ತರಿಸಿದ್ದ ಜನಕ್ಕೆ ಈಗ ಸಣ್ಣ ಮಟ್ಟಿನ ಮಳೆ ಸಮಾಧಾನ ತರಲಿದೆ. ಇಂದು ರಾಜ್ಯದ ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ.

ಕರ್ನಾಟಕದಲ್ಲಿ ಈ ವಾರ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ತಿಳಿಸಿದ್ದವು. ಅದರಂತೆ ನಿನ್ನೆ ಬೆಂಗಳೂರಿನಲ್ಲಿ ಅಪರಾಹ್ನದಿಂದ ಮೋಡ ಕವಿದ ವಾತಾವರಣ ಮತ್ತು ಕೆಲವೆಡೆ ಸಣ್ಣ ಹನಿ ಮಳೆಯಾಗಿದೆ.

ಆದರೆ ಇಂದು ಬೆಂಗಳೂರಿನಲ್ಲಿ ಮಳೆಯ ಸೂಚನೆಯಿಲ್ಲ. ಆದರೆ ರಾಜ್ಯದ ಬೇರೆ ಕೆಲವು ಜಿಲ್ಲೆಗಳಿಗೆ ಇಂದು ಮಳೆಯ ಸೂಚನೆಯಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗೆ ಇಂದು ಮಳೆಯ ಸೂಚನೆಯಿದೆ.

ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಕೆಂಡದಂತೆ ಸುಡುವ ವಾತಾವರಣವಿತ್ತು. ಆದರೆ ಈಗ ಮಳೆಯ ಮುನ್ಸೂಚನೆ ಜನರಿಗೆ ಕೊಂಚ ನೆಮ್ಮದಿ ನೀಡಬಹುದು. ಆದರೆ ಕೃಷಿಕರಿಗೆ ಈ ಮಳೆಯ ಮುನ್ಸೂಚನೆ ಕೊಂಚ ಆತಂಕಕ್ಕೆ ಕಾರಣವಾಗಿದೆ. ಹವಾಮಾನ ವರದಿ ಪ್ರಕಾರ ರಾಜ್ಯದ ಉಳಿದ ಕಡೆ ಇಂದು ತಾಪಮಾನ ಎಂದಿನಂತೆ ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

Operation Sindoor: ರಾಷ್ಟ್ರ ರಾಜಧಾನಿಯಲ್ಲಿ ಎರಡು ಬಾರಿ ಮೊಳಗಿದ ಸೈರನ್, ಬೆಚ್ಚಿದ ಜನತೆ

Pakistan ರಕ್ಷಣಾ ಸಚಿವ ಖವಾಜ ಆಸಿಫ್ ಬುದ್ಧಿವಂತಿಗೆ ಏನನ್ನಬೇಕೋ

India, Pakistan: ಈ ಸಂದರ್ಭದಲ್ಲಿ ಭಾರತೀಯರು ದಯವಿಟ್ಟು ಈ ತಪ್ಪು ಕೆಲಸಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments