Webdunia - Bharat's app for daily news and videos

Install App

Karnataka Weather: ರಾಜ್ಯದಲ್ಲಿ ಇಂದು ಯಾವ ಜಿಲ್ಲೆಗಳಿಗೆ ಮಳೆಯ ಸೂಚನೆ ಇಲ್ಲಿದೆ ವಿವರ

Krishnaveni K
ಬುಧವಾರ, 12 ಮಾರ್ಚ್ 2025 (08:47 IST)
ಬೆಂಗಳೂರು: ಕರ್ನಾಟಕದಲ್ಲಿ ಸತತ ಬಿಸಿಲಿನಿಂದ ತತ್ತರಿಸಿದ್ದ ಜನಕ್ಕೆ ಈಗ ಸಣ್ಣ ಮಟ್ಟಿನ ಮಳೆ ಸಮಾಧಾನ ತರಲಿದೆ. ಇಂದು ರಾಜ್ಯದ ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ.

ಕರ್ನಾಟಕದಲ್ಲಿ ಈ ವಾರ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ತಿಳಿಸಿದ್ದವು. ಅದರಂತೆ ನಿನ್ನೆ ಬೆಂಗಳೂರಿನಲ್ಲಿ ಅಪರಾಹ್ನದಿಂದ ಮೋಡ ಕವಿದ ವಾತಾವರಣ ಮತ್ತು ಕೆಲವೆಡೆ ಸಣ್ಣ ಹನಿ ಮಳೆಯಾಗಿದೆ.

ಆದರೆ ಇಂದು ಬೆಂಗಳೂರಿನಲ್ಲಿ ಮಳೆಯ ಸೂಚನೆಯಿಲ್ಲ. ಆದರೆ ರಾಜ್ಯದ ಬೇರೆ ಕೆಲವು ಜಿಲ್ಲೆಗಳಿಗೆ ಇಂದು ಮಳೆಯ ಸೂಚನೆಯಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗೆ ಇಂದು ಮಳೆಯ ಸೂಚನೆಯಿದೆ.

ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಕೆಂಡದಂತೆ ಸುಡುವ ವಾತಾವರಣವಿತ್ತು. ಆದರೆ ಈಗ ಮಳೆಯ ಮುನ್ಸೂಚನೆ ಜನರಿಗೆ ಕೊಂಚ ನೆಮ್ಮದಿ ನೀಡಬಹುದು. ಆದರೆ ಕೃಷಿಕರಿಗೆ ಈ ಮಳೆಯ ಮುನ್ಸೂಚನೆ ಕೊಂಚ ಆತಂಕಕ್ಕೆ ಕಾರಣವಾಗಿದೆ. ಹವಾಮಾನ ವರದಿ ಪ್ರಕಾರ ರಾಜ್ಯದ ಉಳಿದ ಕಡೆ ಇಂದು ತಾಪಮಾನ ಎಂದಿನಂತೆ ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments