Webdunia - Bharat's app for daily news and videos

Install App

ಆರು ಮಂದಿ ಸಚಿವರಿಗೆ ಕೋರ್ಟ್ ರಕ್ಷಣೆ

Webdunia
ಭಾನುವಾರ, 7 ಮಾರ್ಚ್ 2021 (09:05 IST)
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಬೆನ್ನಲ್ಲೇ ಆರು ಮಂದಿ ಸಚಿವರು ತಮ್ಮ ವಿರುದ್ಧ ಆಕ್ಷೇಪಾರ್ಹ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋಗಿದ್ದರು. ಅವರಿಗೀಗ ಕೋರ್ಟ್ ಅಭಯ ಸಿಕ್ಕಿದೆ.


ಶಿವರಾಮ್ ಕೆ ಹೆಬ್ಬಾರ್, ಡಾ. ಸುಧಾಕರ್, ಬೈರತಿ ಬಸವರಾಜ್, ಬಿಸಿ ಪಾಟೀಲ್, ಎಸ್ ಟಿ ಸೋಮಶೇಖರ್ ಮತ್ತು ನಾರಾಯಣ ಗೌಡ ತಮ್ಮ ವಿರುದ್ಧ ಮಾಧ‍್ಯಮಗಳು ಆಕ್ಷೇಪಾರ್ಹ ಸುದ್ದಿ ಪ್ರಸಾರ ಮಾಡಬಾರದು ಎಂದು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿದ 26 ನೇ ಹೆಚ್ಚುವರಿ ಸಿಟಿ ಸಿವಿಲ್ ನ್ಯಾಯಾಲಯ ಮಾನ ರಕ್ಷಣೆಯ ಭರವಸೆ ನೀಡಿದೆ.

ಈ ಎಲ್ಲಾ ಸಚಿವರ ವಿರುದ್ಧ ದೃಢಪಡಿಸದ, ಮಾನಿಹಾರಕ ಸುದ್ದಿಗಳನ್ನು ಪ್ರಸಾರ ಮಾಡದಂತೆ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಮಾನ ಹಾನಿ ವರದಿಗಳಿಂದ ನಮ್ಮ ವೈಯಕ್ತಿಕ ಮತ್ತು ರಾಜಕೀಯ ವೃತ್ತಿ ಜೀವನಕ್ಕೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ನ್ಯಾಯಾಲಯದ ಮೊರೆ ಹೋಗಿರುವುದಾಗಿ ಸಚಿವ ಬೈರತಿ ಬಸವರಾಜು ಹೇಳಿದ್ದಾರೆ. ಇದೀಗ ಕೋರ್ಟ್ ಅರ್ಜಿಯಲ್ಲಿ ಸಚಿವರು ಹೇಳಿದ ಮಾಧ‍್ಯಮಗಳಿಗೆ ನೋಟಿಸ್ ನೀಡಿದ್ದು, ಅವರ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಆದೇಶ ನೀಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments