Webdunia - Bharat's app for daily news and videos

Install App

14 ಜಿಲ್ಲೆಗಳಲ್ಲಿ ಸಿಟಿ, ಎಂಆರ್ ಐ ಸ್ಕ್ಯಾನ್ ಸ್ಥಗಿತ: ಬಿಲ್ ಪಾವತಿಗೂ ಸರ್ಕಾರದ ಬಳಿ ದುಡ್ಡಿಲ್ವಾ

Krishnaveni K
ಬುಧವಾರ, 25 ಸೆಪ್ಟಂಬರ್ 2024 (15:01 IST)
Photo Credit: Facebook
ಬೆಂಗಳೂರು: ರಾಜ್ಯದ 14 ಜಿಲ್ಲೆಗಳಲ್ಲಿ ಸಿಟಿ ಸ್ಕ್ಯಾನ್, ಎಂಆರ್ ಸ್ಕ್ಯಾನ್ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದರ ಬಗ್ಗೆ ವಿಪಕ್ಷ ಬಿಜೆಪಿ ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ 6 ತಿಂಗಳಿನಿಂದ ಬಿಲ್ ಪಾವತಿಸದ ಹಿನ್ನಲೆಯಲ್ಲಿ 14 ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್, ಎಂಆರ್ ಐ ಸ್ಕ್ಯಾನ್ ಮುಂತಾದ ದುಬಾರಿ ವೆಚ್ಚದ ಸ್ಕ್ಯಾನಿಂಗ್ ಸೌಲಭ್ಯಗಳನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ಬಡ ರೋಗಿಗಳು ಪರದಾಡುವ ಪರಿಸ್ಥಿತಿಯಾಗಿದೆ.

ಈ ಎಲ್ಲಾ ಜಿಲ್ಲೆಗಳ ಸರ್ಜನ್ ಗಳಿಗೆ ಸೆ.22 ರಂದೇ ಕಂಪನಿಗಳು ಪತ್ರ ಬರೆದರೂ ಕ್ರಮ ಕೈಗೊಂಡಿಲ್ಲ. ಬಾಕಿ ಹಣ ನೀಡದ್ದರಿಂದ ಸೆ.24 ರಿಂದಲೇ ಸೇವೆ ಸ್ಥಗಿತಗೊಳಿಸಲಾಗಿದೆ. ಕೋಲಾರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಚಾಮರಾಜನಗರ, ಕೊಡಗು, ವಿಜಯಪುರ, ಧಾರವಾಡ, ಹಾವೇರಿ, ದಾವಣಗೆರೆ, ಯಾದಗಿರಿ, ಉಡುಪಿ ಮತ್ತು ಬಾಗಲಕೋಟೆ ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಲಿ ಸೇವೆ ಬಂದ್ ಆಗಿದೆ.

ಇದನ್ನು ಟೀಕಿಸಿರುವ ಬಿಜೆಪಿ ಸರ್ಕಾರದ ಬಳಿ ಆಸ್ಪತ್ರೆಗಳ ಚಿಕಿತ್ಸಾ ಸೌಲಭ್ಯಕ್ಕೆ ನೀಡಲೂ ದುಡ್ಡಿಲ್ಲವೇ? ಆರೋಗ್ಯ ಸಚಿವರು ನಾಪತ್ತೆಯಾಗಿದ್ದು, ಸರ್ಕಾರ ಐಸಿಯುವಿನಲ್ಲಿದೆ ಎಂದಿದೆ. ಜಿಲ್ಲಾಸ್ಪತ್ರೆಗಳಿಗೆ ಬಿಲ್ ಪಾವತಿ ಮಾಡಲೂ ಸರ್ಕಾರದ ಬಳಿ ದುಡ್ಡಿಲ್ಲ ಎಂದರೆ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದರ್ಥ ಎಂದು ಟೀಕೆ ಮಾಡಿದೆ. ಸಾರ್ವಜನಿಕ ವಲಯದಿಂದಲೂ ಇದರ ಬಗ್ಗೆ ಟೀಕೆ ಕೇಳಿಬಂದಿದ್ದು, ಇದೆಲ್ಲಾ ಗ್ಯಾರಂಟಿ ಮಹಿಮೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments