Webdunia - Bharat's app for daily news and videos

Install App

14 ಜಿಲ್ಲೆಗಳಲ್ಲಿ ಸಿಟಿ, ಎಂಆರ್ ಐ ಸ್ಕ್ಯಾನ್ ಸ್ಥಗಿತ: ಬಿಲ್ ಪಾವತಿಗೂ ಸರ್ಕಾರದ ಬಳಿ ದುಡ್ಡಿಲ್ವಾ

Krishnaveni K
ಬುಧವಾರ, 25 ಸೆಪ್ಟಂಬರ್ 2024 (15:01 IST)
Photo Credit: Facebook
ಬೆಂಗಳೂರು: ರಾಜ್ಯದ 14 ಜಿಲ್ಲೆಗಳಲ್ಲಿ ಸಿಟಿ ಸ್ಕ್ಯಾನ್, ಎಂಆರ್ ಸ್ಕ್ಯಾನ್ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದರ ಬಗ್ಗೆ ವಿಪಕ್ಷ ಬಿಜೆಪಿ ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ 6 ತಿಂಗಳಿನಿಂದ ಬಿಲ್ ಪಾವತಿಸದ ಹಿನ್ನಲೆಯಲ್ಲಿ 14 ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್, ಎಂಆರ್ ಐ ಸ್ಕ್ಯಾನ್ ಮುಂತಾದ ದುಬಾರಿ ವೆಚ್ಚದ ಸ್ಕ್ಯಾನಿಂಗ್ ಸೌಲಭ್ಯಗಳನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ಬಡ ರೋಗಿಗಳು ಪರದಾಡುವ ಪರಿಸ್ಥಿತಿಯಾಗಿದೆ.

ಈ ಎಲ್ಲಾ ಜಿಲ್ಲೆಗಳ ಸರ್ಜನ್ ಗಳಿಗೆ ಸೆ.22 ರಂದೇ ಕಂಪನಿಗಳು ಪತ್ರ ಬರೆದರೂ ಕ್ರಮ ಕೈಗೊಂಡಿಲ್ಲ. ಬಾಕಿ ಹಣ ನೀಡದ್ದರಿಂದ ಸೆ.24 ರಿಂದಲೇ ಸೇವೆ ಸ್ಥಗಿತಗೊಳಿಸಲಾಗಿದೆ. ಕೋಲಾರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಚಾಮರಾಜನಗರ, ಕೊಡಗು, ವಿಜಯಪುರ, ಧಾರವಾಡ, ಹಾವೇರಿ, ದಾವಣಗೆರೆ, ಯಾದಗಿರಿ, ಉಡುಪಿ ಮತ್ತು ಬಾಗಲಕೋಟೆ ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಲಿ ಸೇವೆ ಬಂದ್ ಆಗಿದೆ.

ಇದನ್ನು ಟೀಕಿಸಿರುವ ಬಿಜೆಪಿ ಸರ್ಕಾರದ ಬಳಿ ಆಸ್ಪತ್ರೆಗಳ ಚಿಕಿತ್ಸಾ ಸೌಲಭ್ಯಕ್ಕೆ ನೀಡಲೂ ದುಡ್ಡಿಲ್ಲವೇ? ಆರೋಗ್ಯ ಸಚಿವರು ನಾಪತ್ತೆಯಾಗಿದ್ದು, ಸರ್ಕಾರ ಐಸಿಯುವಿನಲ್ಲಿದೆ ಎಂದಿದೆ. ಜಿಲ್ಲಾಸ್ಪತ್ರೆಗಳಿಗೆ ಬಿಲ್ ಪಾವತಿ ಮಾಡಲೂ ಸರ್ಕಾರದ ಬಳಿ ದುಡ್ಡಿಲ್ಲ ಎಂದರೆ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದರ್ಥ ಎಂದು ಟೀಕೆ ಮಾಡಿದೆ. ಸಾರ್ವಜನಿಕ ವಲಯದಿಂದಲೂ ಇದರ ಬಗ್ಗೆ ಟೀಕೆ ಕೇಳಿಬಂದಿದ್ದು, ಇದೆಲ್ಲಾ ಗ್ಯಾರಂಟಿ ಮಹಿಮೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಬುದ್ಧಿಮಾತು ಹೇಳಿದ ಗುರುವಿಗೆ ಟಿಫನ್ ಬಾಕ್ಸ್‌ನಲ್ಲಿ ತಂದ ಆಪತ್ತು

ಧರ್ಮಸ್ಥಳ ನಿರ್ಮಿಸಲ್ಪಟ್ಟಿದ್ದು, ಸತ್ಯ, ನಂಬಿಕೆ, ಸಮರ್ಪಣೆಯಿಂದ: ಎಸ್‌ಡಿಎಂ ಸಂಸ್ಥೆ

ಧರ್ಮಸ್ಥಳ ಬುರುಡೆ ರಹಸ್ಯದ ಮಾಸ್ಕ್‌ಮ್ಯಾನ್‌ ಬಗ್ಗೆ ಮೊದಲ ಪತ್ನಿ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments