Webdunia - Bharat's app for daily news and videos

Install App

ಕರ್ನಾಟಕ- ಆಂಧ್ರ ಗಡಿಯಲ್ಲಿ ಆನೆ ಹಾವಳಿಗೆ ಜನ ತತ್ತರ

Webdunia
ಸೋಮವಾರ, 14 ಜನವರಿ 2019 (12:13 IST)
ಕಾಡಾನೆಗಳ ಹಿಂಡು ದಾಳಿ ನಡೆಸಿ ಬೆಳೆ ನಾಶ ಮಾಡುತ್ತಿರುವುದರಿಂದ ಕರ್ನಾಟಕ – ಆಂಧ್ರಪ್ರದೇಶ ಗಡಿ ಭಾಗದ ಜನರು ತೀವ್ರ ತೊಂದರೆ ಅನುಭವಿಸುವಂತಾಗಿದೆ.  

ಕೋಲಾರ ಜಿಲ್ಲೆ ಹಾಗೂ ಆಂಧ್ರಪ್ರದೇಶದ ಗಡಿ ಭಾಗದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ.  ಕರ್ನಾಟಕ ಹಾಗೂ ಅಂಧ್ರ ಗಡಿ ಭಾಗದ ಅರಣ್ಯದಲ್ಲಿ ಬೀಡುಬಿಟ್ಟಿರುವ ಗಜಪಡೆಯಿಂದಾಗಿ ಅಲ್ಲಿನ ಜನರು ನೆಮ್ಮದಿ ಕಳೆದುಕೊಳ್ಳುವಂತಾಗಿದೆ.
 50ಕ್ಕೂ ಹೆಚ್ಚು ಕಾಡಾನೆಗಳು ಎರಡು ಗುಂಪುಗಳಾಗಿ ವಿಂಗಡಣೆಯಾಗಿವೆ.  ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ  ಆಂಧ್ರದ ಗುಡಿಪಲ್ಲಿ ಮಂಡಲಂನಲ್ಲಿರುವ ಕಾಡಾನೆಗಳು ಬೆಳೆ ನಾಶಪಡಿಸುತ್ತಲೇ ಇವೆ.

ಆನೆಗಳು ಲಗ್ಗೆಯಿಟ್ಟ ಹಿನ್ನಲೆ ಬಂಗಾರಪೇಟೆ ಗಡಿ ಭಾಗದ ಗ್ರಾಮಸ್ಥರಿಗೂ ಆತಂಕ ಶುರುವಾಗಿದೆ. ಎರಡು ವಾರಗಳಿಂದ ಬೆಳೆಗಳನ್ನ ನಾಶ ಮಾಡುತ್ತಿರುವ ಕಾಡಾನೆಗಳು ಜನರಲ್ಲಿ ಆತಂಕಕ್ಕೆ ಕಾರಣವಾಗಿವೆ.

ತಮಿಳುನಾಡಿನ ಅರಣ್ಯಕ್ಕೆ ಕಾಡಾನೆಗಳನ್ನ ಓಡಿಸಲು ಆಂಧ್ರ ಹಾಗೂ ಕೋಲಾರ ಜಿಲ್ಲೆಯ ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments