Webdunia - Bharat's app for daily news and videos

Install App

T20 ವಿಶ್ವಕಪ್ ಗೆಲ್ಲಿಸಿಕೊಟ್ಟ ಕೋಚ್ ರಾಹುಲ್ ದ್ರಾವಿಡ್ ಗೆ ಕೊನೆಗೂ ಕರ್ನಾಟಕದಿಂದ ಗೌರವ

Krishnaveni K
ಸೋಮವಾರ, 15 ಜುಲೈ 2024 (14:05 IST)
ಬೆಂಗಳೂರು: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದ ಕರ್ನಾಟಕದವರೇ ಆದ ಕೋಚ್ ರಾಹುಲ್ ದ್ರಾವಿಡ್ ಗೆ ಕೊನೆಗೂ ಸದನದಲ್ಲಿ ಗೌರವ ಸಿಕ್ಕಿದೆ.

ಟೀಂ ಇಂಡಿಯಾ ವಿಶ್ವಕಪ್ ಗೆದ್ದು ತವರಿಗೆ ಬಂದಾಗ ಪ್ರಧಾನಿ ಮೋದಿ ರಾಹುಲ್ ದ್ರಾವಿಡ್ ಸೇರಿದಂತೆ ಇಡೀ ಭಾರತೀಯ ತಂಡವನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಸನ್ಮಾನಿಸಿದ್ದರು. ಅದಾದ ಬಳಿಕ ಎಲ್ಲಾ ಕ್ರಿಕೆಟಿಗರನ್ನೂ ಆಯಾ ರಾಜ್ಯದ ಸರ್ಕಾರಗಳು ಬಹುಮಾನ ನೀಡಿ ಗೌರವಿಸಿತ್ತು.

ಆದರೆ ಕರ್ನಾಟಕ ಸರ್ಕಾರ ಮಾತ್ರ ರಾಹುಲ್ ದ್ರಾವಿಡ್ ಗೆ ಕನಿಷ್ಠ ಅಧಿಕೃತವಾಗಿ ಸನ್ಮಾನಿಸುವ ಗೋಜಿಗೂ ಹೋಗಲಿಲ್ಲ ಎಂಬ ವಿಚಾರ ಟೀಕೆಗೊಳಗಾಗಿತ್ತು. ದ್ರಾವಿಡ್ ಜೊತೆಗೆ ಭಾರತ ತಂಡದಲ್ಲಿ ಥ್ರೋ ಡೌನ್ ಸ್ಪೆಷಲಿಸ್ಟ್ ಆಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಕನ್ನಡಿಗ ರಾಘವೇಂದ್ರಗೂ ಸನ್ಮಾನ ಮಾಡಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇಂದು ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು ಮೊದಲ ದಿನವೇ ಈ ವಿಚಾರವನ್ನು ಬಿಜೆಪಿ ಶಾಸಕ ಸುರೇಶ್ ಕುಮಾರ್ ಪ್ರಸ್ತಾಪಿಸಿದ್ದಾರೆ. ಸಭಾಧ್ಯಕ್ಷರಲ್ಲಿ ಒಂದು ಮನವಿ, ಟಿ20 ವಿಶ್ವಕಪ್ ಗೆಲುವಿನಲ್ಲಿ ನಮ್ಮ ಕರ್ನಾಟಕದವರೇ ಆದ ರಾಹುಲ್ ದ್ರಾವಿಡ್ ಅವರ ಕೊಡುಗೆಯೂ ಅಪಾರ. ಹೀಗಾಗಿ ಇಡೀ ಸದನದ ಪರವಾಗಿ ಅವರಿಗೆ ಒಂದು ಅಭಿನಂದನೆ ಸಲ್ಲಿಸಬೇಕು ಎಂದು ಕೋರಿದರು. ಇದಕ್ಕೆ ಎಲ್ಲಾ ಸದಸ್ಯರು ಮೇಜು ತಟ್ಟಿ ತಮ್ಮ ಸಹಮತ ವ್ಯಕ್ತಪಡಿಸಿದರು. ಆಗ ಸ್ಪೀಕರ್ ಖಾದರ್ ‘ಇದನ್ನು ಮಾಡಬೇಕು ಎಂದು ನಾವು ಅಂದುಕೊಂಡಿದ್ದೇವೆ. ಸಂತಾಪ ನಿಲುವಳಿ ಬಳಿಕ ದ್ರಾವಿಡ್ ಗೆ ಅಭಿನಂದನೆ ಸಲ್ಲಿಸಲಿದ್ದೇವೆ. ವಿಷಯ ಪ್ರಸ್ತಾಪಿಸಿದ್ದಕ್ಕೆ ಧನ್ಯವಾದಗಳು’ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments