Webdunia - Bharat's app for daily news and videos

Install App

ವಿವಾದಕ್ಕೆಡೆ ಮಾಡಿರುವ ಕರ್ನಾಟಕ ಬಂದ್ ದಿನಾಂಕ!

Webdunia
ಮಂಗಳವಾರ, 23 ಜನವರಿ 2018 (09:01 IST)
ಬೆಂಗಳೂರು: ಮಹದಾಯಿ ನದಿ ನೀರಿಗಾಗಿ ಫೆಬ್ರವರಿ 4 ರಂದು ವಿವಿಧ ಸಂಘಟನೆಗಳು ಬಂದ್ ಗೆ ಕರೆ ನೀಡಿರುವುದು ಇದೀಗ ಆಡಳಿತಾರೂಢ ಕಾಂಗ್ರೆಸ್ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.
 

ಫೆಬ್ರವರಿ 4 ರಂದು ಬಿಜೆಪಿಯ ಕರ್ನಾಟಕ ಪರಿವರ್ತನಾ ರ್ಯಾಲಿಯ ಸಮಾರೋಪ ಸಮಾರಂಭ ಆಯೋಜಿಸಲಾಗಿದ್ದು, ಇದರಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿಯಾಗಲಿದ್ದಾರೆ. ಇದೇ ದಿನ ಬಂದ್ ನಡೆಸಿರುವುದಕ್ಕೆ ಈಗ ಪ್ರತಿಪಕ್ಷ ಬಿಜೆಪಿ ಟೀಕಾಪ್ರಹಾರ ನಡೆಸಿದೆ.

ಪ್ರಧಾನಿ ಕಾರ್ಯಕ್ರಮಕ್ಕೆ ಬೇಕೆಂದೇ ಅಡ್ಡಿಪಡಿಸಲು ಕಾಂಗ್ರೆಸ್ ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿದೆ ಮತ್ತು ಅದೇ ದಿನ ಬಂದ್ ನಡೆಸಲು ಕುಮ್ಮಕ್ಕು ನೀಡಿದೆ ಎಂಬ ಆರೋಪ ಮಾಡಿದೆ. ಹೀಗಾಗಿ ಇದೀಗ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಅತ್ತ ಪ್ರಧಾನಿ ಕಾರ್ಯಕ್ರಮಕ್ಕೆ ಯಾವುದೇ ತೊಂದರೆಯಿಲ್ಲದಂತೆ ನೋಡಿಕೊಳ್ಳುವ ಅನಿವಾರ್ಯತೆಗೆ ಸರ್ಕಾರ ಸಿಲುಕಿದೆ. ಅಷ್ಟೇ ಅಲ್ಲ, ಬಿಜೆಪಿ ಯಾತ್ರೆಗೆ ತೊಂದರೆ ನೀಡುವುದಕ್ಕಾಗಿಯೇ ಕರ್ನಾಟಕ ಬಂದ್ ಗೆ ಬೆಂಬಲ ನೀಡುತ್ತಿದೆ ಎಂದು ಜನರ ಮನದಲ್ಲಿ ಭಾವನೆ ಮೂಡದಂತೆ ನೋಡಿಕೊಳ್ಳುವ ಅನಿವಾರ್ಯತೆ ಎದುರಾಗಿದೆ.

ಇದೀಗ ಉಭಯ ಪಕ್ಷಗಳ ನಡುವಿನ ಕೆಸರೆರಾಚಟಕ್ಕೆ ನಾಂದಿ ಹಾಡಿದೆ. ಇದೊಂದು ಹೇಸಿಗೆ ರಾಜಕಾರಣ ಎಂದು ಬಿಜೆಪಿ ಆರೋಪಿಸಿದರೆ, ಅತ್ತ ಸಿಎಂ ಸಿದ್ದರಾಮಯ್ಯ, ಹೀಗೊಂದು ಆರೋಪ ಮಾಡುವವರಿಗೆ ಕನಿಷ್ಠ ಸಾಮಾನ್ಯ ಜ್ಞಾನವೂ ಇಲ್ಲ ಎಂದು ತಿರುಗೇಟು ನೀಡಿದ್ದಾರೆ. ಅಂತೂ ಯಾವ ಉದ್ದೇಶಕ್ಕಾಗಿ ಬಂದ್ ಗೆ ಕರೆ ನೀಡಲಾಗಿದೆಯೋ ಅದನ್ನು ಮರೆತು ರಾಜಕೀಯ ಪಕ್ಷಗಳು ತಮ್ಮ ಕೆಸರೆರಾಚಟದಲ್ಲಿ ತೊಡಗಿರುವುದು ಮಾತ್ರ ವಿಪರ್ಯಾಸ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹದೇವಪುರ ಕ್ಷೇತ್ರದಲ್ಲಿ ಎಷ್ಟು ನಕಲಿ ಮತದಾರರಿದ್ದರು: ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ಪುಣೆ: ಬೀದಿ ನಾಯಿಯನ್ನು ಬಿಡದ ಕಾಮುಕ, ಕರ್ನಾಟಕದವನ ಮೇಲೆ ಬಿತ್ತು ಪ್ರಕರಣ

ನಾಳೆ ರಾಜ್ಯಕ್ಕೆ ರಾಹುಲ್ ಗಾಂಧಿ, ಸಿಲಿಕಾನ್ ಸಿಟಿ ಮಂದಿಗೆ ಟ್ರಾಫಿಕ್ ಬಿಸಿ

ಧರ್ಮಸ್ಥಳ ಸುತ್ತ ಮುತ್ತಾ ಅಹಿತಕರ ಘಟನೆಯಲ್ಲಿ ಭಾರೀ ಬೆಳವಣಿಗೆ

ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿರುದ್ಧ ಕೋಟ್ಯಾಂತರ ರೂಪಾಯಿ ಗುಳುಂ: ಬಿಜೆಪಿ ಆರೋಪ

ಮುಂದಿನ ಸುದ್ದಿ
Show comments