ವಿವಾದಕ್ಕೆಡೆ ಮಾಡಿರುವ ಕರ್ನಾಟಕ ಬಂದ್ ದಿನಾಂಕ!

Webdunia
ಮಂಗಳವಾರ, 23 ಜನವರಿ 2018 (09:01 IST)
ಬೆಂಗಳೂರು: ಮಹದಾಯಿ ನದಿ ನೀರಿಗಾಗಿ ಫೆಬ್ರವರಿ 4 ರಂದು ವಿವಿಧ ಸಂಘಟನೆಗಳು ಬಂದ್ ಗೆ ಕರೆ ನೀಡಿರುವುದು ಇದೀಗ ಆಡಳಿತಾರೂಢ ಕಾಂಗ್ರೆಸ್ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.
 

ಫೆಬ್ರವರಿ 4 ರಂದು ಬಿಜೆಪಿಯ ಕರ್ನಾಟಕ ಪರಿವರ್ತನಾ ರ್ಯಾಲಿಯ ಸಮಾರೋಪ ಸಮಾರಂಭ ಆಯೋಜಿಸಲಾಗಿದ್ದು, ಇದರಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿಯಾಗಲಿದ್ದಾರೆ. ಇದೇ ದಿನ ಬಂದ್ ನಡೆಸಿರುವುದಕ್ಕೆ ಈಗ ಪ್ರತಿಪಕ್ಷ ಬಿಜೆಪಿ ಟೀಕಾಪ್ರಹಾರ ನಡೆಸಿದೆ.

ಪ್ರಧಾನಿ ಕಾರ್ಯಕ್ರಮಕ್ಕೆ ಬೇಕೆಂದೇ ಅಡ್ಡಿಪಡಿಸಲು ಕಾಂಗ್ರೆಸ್ ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿದೆ ಮತ್ತು ಅದೇ ದಿನ ಬಂದ್ ನಡೆಸಲು ಕುಮ್ಮಕ್ಕು ನೀಡಿದೆ ಎಂಬ ಆರೋಪ ಮಾಡಿದೆ. ಹೀಗಾಗಿ ಇದೀಗ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಅತ್ತ ಪ್ರಧಾನಿ ಕಾರ್ಯಕ್ರಮಕ್ಕೆ ಯಾವುದೇ ತೊಂದರೆಯಿಲ್ಲದಂತೆ ನೋಡಿಕೊಳ್ಳುವ ಅನಿವಾರ್ಯತೆಗೆ ಸರ್ಕಾರ ಸಿಲುಕಿದೆ. ಅಷ್ಟೇ ಅಲ್ಲ, ಬಿಜೆಪಿ ಯಾತ್ರೆಗೆ ತೊಂದರೆ ನೀಡುವುದಕ್ಕಾಗಿಯೇ ಕರ್ನಾಟಕ ಬಂದ್ ಗೆ ಬೆಂಬಲ ನೀಡುತ್ತಿದೆ ಎಂದು ಜನರ ಮನದಲ್ಲಿ ಭಾವನೆ ಮೂಡದಂತೆ ನೋಡಿಕೊಳ್ಳುವ ಅನಿವಾರ್ಯತೆ ಎದುರಾಗಿದೆ.

ಇದೀಗ ಉಭಯ ಪಕ್ಷಗಳ ನಡುವಿನ ಕೆಸರೆರಾಚಟಕ್ಕೆ ನಾಂದಿ ಹಾಡಿದೆ. ಇದೊಂದು ಹೇಸಿಗೆ ರಾಜಕಾರಣ ಎಂದು ಬಿಜೆಪಿ ಆರೋಪಿಸಿದರೆ, ಅತ್ತ ಸಿಎಂ ಸಿದ್ದರಾಮಯ್ಯ, ಹೀಗೊಂದು ಆರೋಪ ಮಾಡುವವರಿಗೆ ಕನಿಷ್ಠ ಸಾಮಾನ್ಯ ಜ್ಞಾನವೂ ಇಲ್ಲ ಎಂದು ತಿರುಗೇಟು ನೀಡಿದ್ದಾರೆ. ಅಂತೂ ಯಾವ ಉದ್ದೇಶಕ್ಕಾಗಿ ಬಂದ್ ಗೆ ಕರೆ ನೀಡಲಾಗಿದೆಯೋ ಅದನ್ನು ಮರೆತು ರಾಜಕೀಯ ಪಕ್ಷಗಳು ತಮ್ಮ ಕೆಸರೆರಾಚಟದಲ್ಲಿ ತೊಡಗಿರುವುದು ಮಾತ್ರ ವಿಪರ್ಯಾಸ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇತನ್ ಅಗರ್ವಾಲ್ ಮರ್ಡರ್ ಪ್ರಕರಣದಲ್ಲಿ ಪೊಲೀಸರಿಗೆ ಇದೊಂದು ವಿಚಾರ ಇನ್ನೂ ರಹಸ್ಯವಾಗಿಯೇ ಉಳಿದಿದೆ

ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭಾರತದ ಜೈನ ಮುನಿಗೆ ಆಹ್ವಾನ, ಅದು ಯಾರೂ ಗೊತ್ತಾ

ಆಸ್ಪತ್ರೆ ಸೇರಿದ ಅಯೋದ್ಯೆ ರಾಮಜನ್ಮಭೂಮಿ ಟ್ರಸ್ಟ್‌ ಅಧ್ಯಕ್ಷ ಮಹಂತ್ ನೃತ್ಯ, ನಿಜವಾಗಲೂ ಆಗಿದ್ದೇನು

ರಾಜ್ಯ ಸರ್ಕಾರಕ್ಕೆ ಪ್ರಯಾಣಿಕರ ಪ್ರಾಣದ ಜತೆ ಚೆಲ್ಲಾಟ, ಖುದ್ದು ಫೀಲ್ಡಿಗಿಳಿದ ತೇಜಸ್ವಿ ಸೂರ್ಯ, Video

ನೀನು ದಪ್ಪ ಇದ್ದೀಯಾ, ಮಕ್ಕಳಾಗಲ್ಲ ಎಂದು ಹೀಯಾಳಿಸುತ್ತಿದ್ದ ಪಾಪಿ ಗಂಡ ಮುಗ್ದ ಹೆಂಡತಿಗೆ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments