Select Your Language

Notifications

webdunia
webdunia
webdunia
webdunia

ಕಾವೇರಿ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯಗೂ ಜಯಲಲಿತಾಗೂ ಮದ್ವೆ

ಕಾವೇರಿ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯಗೂ ಜಯಲಲಿತಾಗೂ ಮದ್ವೆ
ಬೆಂಗಳೂರು , ಶುಕ್ರವಾರ, 9 ಸೆಪ್ಟಂಬರ್ 2016 (13:21 IST)
ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಮತ್ತು ತಮಿಳುನಾಡಿನ ಮುಖ್ಯಮಂತ್ರಿ ಜೆ.ಜಯಲಲಿತಾಗೂ ಮದ್ವೆ ಮಾಡಿಸಿದ ಘಟನೆ ನಡೆದಿದೆ.
 
ಕರ್ನಾಟಕ ಬಂದ್ ಅಂಗವಾಗಿ ಅಣುಕು ಪ್ರದರ್ಶನ ನಡೆಸಿದ ಪ್ರತಿಭಟನಾಕಾರರು, ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಮತ್ತು ತಮಿಳುನಾಡಿನ ಮುಖ್ಯಮಂತ್ರಿ ಜೆ.ಜಯಲಲಿತಾಗೂ ಮದ್ವೆ ಮಾಡಿಸಿ ಘೋಷಣೆಗಳನ್ನು ಕೂಗಿದರು.
 
ಸುಪೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ವಿರೋಧಿಸಿ ಇಂದಿನ ಕರ್ನಾಟಕ್ ಬಂದ್‌ ಸಂದರ್ಭದಲ್ಲಿ ಸೇರಿದ ಸಾವಿರಾರು ಪ್ರತಿಭಟನಾಕಾರರು ತಮಿಳುನಾಡು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
 
ಪದೇ ಪದೇ ಕಾವೇರಿ ನೀರಿಗಾಗಿ ಕ್ಯಾತೆ ತೆಗೆಯುತ್ತಿರುವ ತಮಿಳುನಾಡು ಸರಕಾರಕ್ಕೆ ತಕ್ಕ ಪಾಠ ಕಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮ್ಯನವರನ್ನು ಕನ್ನಡ ಪರ ಹೋರಾಟಗಾರರು ಒತ್ತಾಯಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಜಯಾ ಸರಕಾರಕ್ಕೆ ಯೋಗ್ಯತೆ ಇದ್ರೆ ಡ್ಯಾಂ ಕಟ್ಟಲಿ: ಜಗ್ಗೇಶ್