Publish Date: Wed, 12 Feb 2020 (09:07 IST)
Updated Date: Wed, 12 Feb 2020 (09:09 IST)
ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಬೇಕು ಎಂದ ಆಗ್ರಹಿಸಿ ನಾಳೆ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮುಷ್ಕರ ನಡೆಯಲಿದೆ.
ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಾಳೆ ಕರ್ನಾಟಕ ಸಂಘಟನೆಗಳ ಒಕ್ಕೂಟ ಬಂದ್ ಗೆ ಕರೆ ನೀಡಿದೆ. ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಹೆಚ್ಚಿನ ಮೀಸಲಾತಿ ಇರಬೇಕೆಂದು ಆಗ್ರಹಿಸಿ ಬಂದ್ ನಡೆಸಲಾಗುತ್ತಿದೆ.
ಇದಕ್ಕೆ ಕೆಎಸ್ ಆರ್ ಟಿಸಿ ಕೂಡಾ ಬೆಂಬಲ ನೀಡಲಿದೆಯೇ ಎಂದು ಇನ್ನೂ ತಿಳಿದು ಬರಬೇಕಿದೆ. ಆದರೆ ಬೆಂಗಳೂರಿನಲ್ಲಿ ಓಲಾ-ಉಬರ್ ಮುಂತಾ ಆಪ್ ಆಧಾರಿತ ಟ್ಯಾಕ್ಸಿಗಳ ಸೇವೆಯೂ ಲಭ್ಯವಿರದು.