Webdunia - Bharat's app for daily news and videos

Install App

ಸಾಹಿತಿ ಹಂಪ ನಾಗರಾಜಯ್ಯ ಭಾಷಣವೇ ದಸರಾಗೆ ಕಪ್ಪು ಚುಕ್ಕೆ: ಬಿಜೆಪಿ

Krishnaveni K
ಶನಿವಾರ, 5 ಅಕ್ಟೋಬರ್ 2024 (14:47 IST)
ಬೆಂಗಳೂರು: ಮೈಸೂರು ಮುಡಾದಲ್ಲಿ ಯಾರೇ ನಿವೇಶನ ಪಡೆದಿದ್ದರೂ ಎಲ್ಲ ನಿವೇಶನಗಳ ಹಂಚಿಕೆ ಕುರಿತು ತನಿಖೆ ನಡೆಯಲಿ; ಮುಖ್ಯಮಂತ್ರಿಗಳು ಇದನ್ನು ಸಿಬಿಐಗೆ ತನಿಖೆಗಾಗಿ ಒಪ್ಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಒತ್ತಾಯಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮೈಸೂರಿನಲ್ಲಿ ಮೊನ್ನೆ ದಸರಾ ಉದ್ಘಾಟನೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರಾಜೀನಾಮೆ ಕೊಡುವ ಅಗತ್ಯ ಇಲ್ಲ; ಕುಮಾರಸ್ವಾಮಿ ರಾಜೀನಾಮೆ ಕೊಡುತ್ತಾರಾ ಎಂದು ಜಿ.ಟಿ.ದೇವೇಗೌಡರು ಮಾತನಾಡಿದ್ದಾರೆ. ಜಿ.ಟಿ.ದೇವೇಗೌಡರಿಗೆ ತಾವು ಸಿದ್ದರಾಮಯ್ಯರ ಪರ, ಬೆನ್ನೆಲುಬಾಗಿ ನಿಲ್ಲದಿದ್ದರೆ ತಮ್ಮ ಸೈಟುಗಳೂ ಹೋಗಬಹುದೆಂಬ ಭಯ ಆಗಿರಬಹುದು; ಅವರ ಒಳಮನಸ್ಸು ಸಿದ್ದರಾಮಯ್ಯರು ರಾಜೀನಾಮೆ ಕೊಡಬೇಕೆಂದೇ ಇದೆ ಎಂದು ವಿಶ್ಲೇಷಿಸಿದರು.

ಸಾಹಿತಿ, ದಸರಾ ಉದ್ಘಾಟಕ ಹಂಪ ನಾಗರಾಜಯ್ಯ ಅವರು ಸಾಹಿತ್ಯ, ದಸರಾ, ಮೈಸೂರು ರಾಜರ ಮಾದರಿ ಸಾಧನೆಗಳ ಕುರಿತು ಮಾತನಾಡಬೇಕಿತ್ತು. ಹೈದರಾಬಾದ್ ನಿಜಾಮರಿಗೆ ಹೋಲಿಸಿದರೆ ಮೈಸೂರಿನ ಒಡೆಯರ್ ಅವರ ಆಡಳಿತ ಅತ್ಯಂತ ಸುವ್ಯವಸ್ಥಿತವಾಗಿತ್ತು. ಅಭಿವೃದ್ಧಿಗೆ ಅದು ಪೂರಕವಾಗಿತ್ತು. ಕೆಆರ್‍ಎಸ್ ಕಟ್ಟಿದವರು ಯಾರು? ಬೆಂಗಳೂರಿಗೆ ಅನೇಕ ಕೊಡುಗೆ ಕೊಟ್ಟವರು ಯಾರು?- ಹೀಗೆ ಅನೇಕ ವಿಚಾರಗಳಲ್ಲಿ ಒಡೆಯರ್ ಅವರ ಆಡಳಿತ ದೇಶಕ್ಕೆ ಮಾದರಿಯಾಗಿತ್ತು ಎಂದು ತಿಳಿಸಿದರು.

ಹಂಪನಾ ಅವರು ತಮ್ಮ ಸಾಹಿತ್ಯದ ಪ್ರಶಸ್ತಿ, ಕೃತಿಗಳಿಗೆ ಕಪ್ಪು ಚುಕ್ಕಿ ಆಗುವಂತೆ ಮಾಡಿದ್ದಾರೆ. ಅವರಿಗೆ ಈ ಥರ ಭಾಷಣ ಮಾಡಲು ನಾಚಿಕೆ ಆಗಬೇಕಿತ್ತು ಎಂದು ಆಕ್ಷೇಪಿಸಿದರು. ಸಿದ್ದರಾಮಯ್ಯ, ಸರಕಾರದ ಬಗ್ಗೆ ಹೊಗಳುಭಟರಂತೆ ಅವರು ಭಾಷಣ ಮಾಡಿದ್ದಾರೆ. ಇದು ದಸರಾಕ್ಕೆ ಕಪ್ಪುಚುಕ್ಕಿ ಇಟ್ಟಂತಾಗಿದೆ
ಎಂದು ತಿಳಿಸಿದರು.

ಸಚಿವ ದಿನೇಶ್ ಗುಂಡೂರಾವ್ ಅವರನ್ನು ತಕ್ಷಣವೇ ಸಚಿವ ಸ್ಥಾನದಿಂದ ವಜಾ ಮಾಡಲು ಆಗ್ರಹಿಸಿದರು. ಸ್ವಾತಂತ್ರ್ಯಕ್ಕಾಗಿ ಹೋರಾಡಿ 28 ವರ್ಷ ಜೈಲುವಾಸ ಅನುಭವಿಸಿದ ಅಪರೂಪದವರಾದ ಸಾವರ್ಕರ್ ಅವರ ಕುರಿತು ಟೀಕಿಸಿದ ದಿನೇಶ್ ಗುಂಡೂರಾವ್ ಕ್ಷಮೆ ಯಾಚಿಸಬೇಕೆಂದು ಅವರು
ತಿಳಿಸಿದರು.

ದಿನೇಶ್ ಗುಂಡೂರಾವ್ ಅವರಿಗೆ ಸ್ವಾತಂತ್ರ್ಯ ಹೋರಾಟದ ಅರಿವಿಲ್ಲ ಎಂದು ಕಾಣುತ್ತದೆ. ನೇತಾಜಿ ಸುಭಾಷ್‍ಚಂದ್ರ ಬೋಸ್ ಮತ್ತು ಸಾವರ್ಕರ್ ಅವರು ಕ್ರಾಂತಿಕಾರಕ ಹೋರಾಟದಿಂದ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದರು. ಅವರ ಕುರಿತ ಕೃತಿಗಳನ್ನು ದಿನೇಶ್ ಗುಂಡೂರಾವ್ ಓದಬೇಕು; ಬಾಯಿಗೆ ಬಂದಂತೆ ಮಾತನಾಡಬಾರದು ಎಂದು ಒತ್ತಾಯಿಸಿದರು.
 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments