Webdunia - Bharat's app for daily news and videos

Install App

ಕೊತ್ವಾಲ್ ಬ್ರದರ್ಸ್ ಬೆದರಿಕೆ ಶುರು: ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಆರೋಪ

Krishnaveni K
ಬುಧವಾರ, 17 ಏಪ್ರಿಲ್ 2024 (11:50 IST)
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಸಹೋದರ ಡಿಕೆ ಸುರೇಶ್ ಗೆಲ್ಲಿಸಲು ಡಿಕೆ ಶಿವಕುಮಾರ್, ಕೊತ್ವಾಲ್ ಬ್ರದರ್ಸ್ ನಂತೆ ಬೆದರಿಸುವ ಮಟ್ಟಕ್ಕಿಳಿದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಈ ಬಗ್ಗೆ ಎಕ್ಸ್ ಮಾಡಿರುವ ರಾಜ್ಯ ಬಿಜೆಪಿ, ಅಪಾರ್ಟ್ ಮೆಂಟ್ ನಿವಾಸಿಗಳೊಂದಿಗೆ ಡಿಕೆ ಶಿವಕುಮಾರ್ ಸಭೆಯಲ್ಲಿ ನೀವು ನನಗೆ ವೋಟ್ ಮಾಡಿದರೆ ನೀರು ಕೊಡುತ್ತೇನೆ, ಹಕ್ಕುಪತ್ರ ಕೊಡುತ್ತೇನೆ ಎಂಬಿತ್ಯಾದಿ ಭರವಸೆ ನೀಡುತ್ತಿರುವ ದೃಶ್ಯವನ್ನು ಪ್ರಕಟಿಸಿದ್ದು, ಡಿಕೆ ಸಹೋದರರು ಇಲ್ಲಿನ ನಿವಾಸಿಗಳನ್ನು ಬೆದರಿಸುವ ಮಟ್ಟಕ್ಕಿಳಿದಿದ್ದಾರೆ ಎಂದಿದೆ.

ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ರೈತನೊಬ್ಬ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಅವರನ್ನು ಬೆಂಬಲಿಸಿದ್ದಕ್ಕೆ ಡಿಕೆ ಸುರೇಶ್ ಬೆಂಬಲಿಗರು ಆತನ ಹೊಲವನ್ನೇ ಸುಟ್ಟುಹಾಕಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿತ್ತು. ಇದನ್ನು ಪ್ರಸ್ತಾಪಿಸಿರುವ ಬಿಜೆಪಿ ಘಟಕ ನಿನ್ನೆ ರೈತನ ಹೊಲ ಸುಟ್ಟು ರೈತನಿಗೆ ಗನ್ ಪಾಯಿಂಟ್ ಇಟ್ಟು ವಾತಾವರಣವನ್ನು ಭಯಭೀತಗೊಳಿಸಿದ್ದರು. ಇಂದು ಅಪಾರ್ಟ್ ಮೆಂಟ್ ನಿವಾಸಿಗಳ ಜೊತೆ ಸಭೆ ನಡೆಸಿ ನೀವು ಡಿಕೆ ಸುರೇಶ್ ಗೆ ವೋಟ್ ಕೊಡದೇ ಇದ್ದರೆ ನಿಮಗೆ ನೀರು ಕೊಡುವುದಿಲ್ಲ, ಹಕ್ಕು ಪತ್ರ ಕೊಡುವುದಿಲ್ಲ ಎಂದು ನೇರವಾಗಿಯೇ ಡಿಸಿಎಂ ಡಿಕೆ ಶಿವಕುಮಾರ್ ಬಹಿರಂಗವಾಗಿ ಬೆದರಿಕೆ ಹಾಕುತ್ತಿದ್ದಾರೆ. ನಿಮ್ಮ ಈ ಗೊಡ್ಡು ಬೆದರಿಕೆಗಳಿಗೆ ಜನತೆ ಏಪ್ರಿಲ್ 26 ರಂದು ಅಂತಿಮ ಮೊಳೆ ಹೊಡೆಯುವುದು ನಿಶ್ಚಿತ ಎಂದು ವಾಗ್ದಾಳಿ ನಡೆಸಿದೆ.

ತೋಟವನ್ನು ಸುಟ್ಟವರು ನಾವು,ನಿನ್ನನ್ನೂ ಸುಟ್ಟು ಹಾಕವುದು ಕಷ್ಟವೇ ರೈತನಿಗೆ ಬೆದರಿಕೆ ಹಾಕಿದ್ದಾರೆ ಬಿಜೆಪಿ ಆರೋಪಿಸಿದೆ. ರೈತ ಪ್ರೇಮಕುಮಾರ್ ಎಂಬಾತನ ತೋಟದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.  ಅಧಿಕಾರವಿದೆ ಎಂದು ಯಾವ ಮಟ್ಟಕ್ಕೆ ಬೇಕಾದರೂ ಇಳಿಯಬೇಡಿ ಎಂದು ಬಿಜೆಪಿ ಕಿಡಿ ಕಾರಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments