ಪ್ರದೀಪ್ ಈಶ್ವರ್ ಗೆ ಪ್ರಚಾರದ ಗೀಳಿದ್ದರೆ ಮಜಾ ಟಾಕೀಸ್ ಗೋ ಕಾಮಿಡಿ ಕಿಲಾಡಿಗಳಿಗೋ ಹೋಗಿ

Krishnaveni K
ಶನಿವಾರ, 15 ಮಾರ್ಚ್ 2025 (13:12 IST)
ಬೆಂಗಳೂರು: ಕೈವಾರ ತಾತಯ್ಯನವರ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲಿ ಆವಾಜ್ ಹಾಕಿದ ಶಾಸಕ ಪ್ರದೀಪ್ ಈಶ್ವರ್ ಗೆ ಬಿಜೆಪಿ ತಿರುಗೇಟು ನೀಡಿದ್ದು ನಿಮಗೆ ಅಷ್ಟೊಂದು ಪ್ರಚಾರದ ಹುಚ್ಚಿದ್ದರೆ ಮಜಾ ಟಾಕೀಸ್ ಗೋ, ಕಾಮಿಡಿ ಕಿಲಾಡಿ ಶೋಗೋ ಹೋಗಿ ಎಂದು ಟಾಂಗ್ ಕೊಟ್ಟಿದೆ.

ನಿನ್ನೆ ಸಂಜೆ ನಗರದಲ್ಲಿ ಕೈವಾರ ತಾತಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ವೇದಿಕೆಯಲ್ಲಿ ಮಾತನಾಡುವಾಗ ಮುಂಭಾಗದಲ್ಲಿ ಕೂತಿದ್ದ ಬಲಿಜ ಸಮುದಾಯದ ಪಿಕೆ ಸುರೇಶ್ ತಮಗೆ ಸ್ಥಾನ ಮಾನ ನೀಡದೇ ಇರುವುದಕ್ಕೆ ಅಪಸ್ವರವೆತ್ತಿದರು.

ಈ ವೇಳೆ ಇಬ್ಬರ ನಡುವೆ ವಾಗ್ದಾದ ನಡೆಯಿತು. ಆಗ ಪ್ರದೀಪ್ ಈಶ್ವರ್ ‘ಏಯ್ ಸುಮ್ನೇ ಕೂತ್ಕೊಳ್ಳಯ್ಯ. ಇದು ನಿಮ್ಮಪ್ಪನ ಸರ್ಕಾರ ಅಲ್ಲ, ಸಿದ್ದರಾಮಯ್ಯನವರ ಸರ್ಕಾರ. ಇದು ಸಿದ್ದರಾಮಯ್ಯನವರ ಕಾರ್ಯಕ್ರಮ’ ಎಂದು ಆವಾಜ್ ಹಾಕಿದ್ದರು. ವೇದಿಕೆಯಲ್ಲಿ ಬಿಜೆಪಿ ಸಂಸದ ಪಿಸಿ ಮೋಹನ್ ಕೂಡಾ ಇದ್ದರು. ಹಾಗಿದ್ದರೆ ನಾನು ಇಲ್ಲಿ ಇರಬಾರದಿತ್ತೇ ಎಂದು ಅವರೂ ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಘಟನೆ ಬಗ್ಗೆ ಟ್ವೀಟ್ ಮೂಲಕ ಬಿಜೆಪಿ ತಿರುಗೇಟು ನೀಡಿದೆ. ‘ಆಕ್ಸಿಡೆಂಟಲ್ ಎಂಎಲ್ ಎ ಪ್ರದೀಪ್ ಈಶ್ವರ್ ಅವರೇ, ಅಲ್ಲಿ ನಡೆಯುತ್ತಿರುವುದು ಬಿಜೆಪಿ ಕಾರ್ಯಕ್ರಮವೂ ಅಲ್ಲ, ಕಾಂಗ್ರೆಸ್ ಕಾರ್ಯಕ್ರಮವೂ ಅಲ್ಲ, ಅದು ಕೈವಾರ ತಾತಯ್ಯನವರ ಕಾರ್ಯಕ್ರಮ. ನಿಮಗೆ ಅಷ್ಟೊಂದು ಪ್ರಚಾರದ ಗೀಳಿದ್ದರೆ ಮಜಾ ಟಾಕೀಸ್ ಶೋನೋ, ಕಾಮಿಡಿ ಕಿಲಾಡಿಗಳು ಕಾರ್ಯಕ್ರಮಕ್ಕೆ ಹೋಗಿ. ನಿಮ್ಮ ಪ್ರಚಾರದ ಹಪಹಪಿಗೆ ಕೈವಾರ ತಾತಯ್ಯನವರನ್ನು ಅವಮಾನಿಸಬೇಡಿ’ ಎಂದು ತಿರುಗೇಟು ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments