Webdunia - Bharat's app for daily news and videos

Install App

ಪ್ರದೀಪ್ ಈಶ್ವರ್ ಗೆ ಪ್ರಚಾರದ ಗೀಳಿದ್ದರೆ ಮಜಾ ಟಾಕೀಸ್ ಗೋ ಕಾಮಿಡಿ ಕಿಲಾಡಿಗಳಿಗೋ ಹೋಗಿ

Krishnaveni K
ಶನಿವಾರ, 15 ಮಾರ್ಚ್ 2025 (13:12 IST)
ಬೆಂಗಳೂರು: ಕೈವಾರ ತಾತಯ್ಯನವರ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲಿ ಆವಾಜ್ ಹಾಕಿದ ಶಾಸಕ ಪ್ರದೀಪ್ ಈಶ್ವರ್ ಗೆ ಬಿಜೆಪಿ ತಿರುಗೇಟು ನೀಡಿದ್ದು ನಿಮಗೆ ಅಷ್ಟೊಂದು ಪ್ರಚಾರದ ಹುಚ್ಚಿದ್ದರೆ ಮಜಾ ಟಾಕೀಸ್ ಗೋ, ಕಾಮಿಡಿ ಕಿಲಾಡಿ ಶೋಗೋ ಹೋಗಿ ಎಂದು ಟಾಂಗ್ ಕೊಟ್ಟಿದೆ.

ನಿನ್ನೆ ಸಂಜೆ ನಗರದಲ್ಲಿ ಕೈವಾರ ತಾತಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ವೇದಿಕೆಯಲ್ಲಿ ಮಾತನಾಡುವಾಗ ಮುಂಭಾಗದಲ್ಲಿ ಕೂತಿದ್ದ ಬಲಿಜ ಸಮುದಾಯದ ಪಿಕೆ ಸುರೇಶ್ ತಮಗೆ ಸ್ಥಾನ ಮಾನ ನೀಡದೇ ಇರುವುದಕ್ಕೆ ಅಪಸ್ವರವೆತ್ತಿದರು.

ಈ ವೇಳೆ ಇಬ್ಬರ ನಡುವೆ ವಾಗ್ದಾದ ನಡೆಯಿತು. ಆಗ ಪ್ರದೀಪ್ ಈಶ್ವರ್ ‘ಏಯ್ ಸುಮ್ನೇ ಕೂತ್ಕೊಳ್ಳಯ್ಯ. ಇದು ನಿಮ್ಮಪ್ಪನ ಸರ್ಕಾರ ಅಲ್ಲ, ಸಿದ್ದರಾಮಯ್ಯನವರ ಸರ್ಕಾರ. ಇದು ಸಿದ್ದರಾಮಯ್ಯನವರ ಕಾರ್ಯಕ್ರಮ’ ಎಂದು ಆವಾಜ್ ಹಾಕಿದ್ದರು. ವೇದಿಕೆಯಲ್ಲಿ ಬಿಜೆಪಿ ಸಂಸದ ಪಿಸಿ ಮೋಹನ್ ಕೂಡಾ ಇದ್ದರು. ಹಾಗಿದ್ದರೆ ನಾನು ಇಲ್ಲಿ ಇರಬಾರದಿತ್ತೇ ಎಂದು ಅವರೂ ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಘಟನೆ ಬಗ್ಗೆ ಟ್ವೀಟ್ ಮೂಲಕ ಬಿಜೆಪಿ ತಿರುಗೇಟು ನೀಡಿದೆ. ‘ಆಕ್ಸಿಡೆಂಟಲ್ ಎಂಎಲ್ ಎ ಪ್ರದೀಪ್ ಈಶ್ವರ್ ಅವರೇ, ಅಲ್ಲಿ ನಡೆಯುತ್ತಿರುವುದು ಬಿಜೆಪಿ ಕಾರ್ಯಕ್ರಮವೂ ಅಲ್ಲ, ಕಾಂಗ್ರೆಸ್ ಕಾರ್ಯಕ್ರಮವೂ ಅಲ್ಲ, ಅದು ಕೈವಾರ ತಾತಯ್ಯನವರ ಕಾರ್ಯಕ್ರಮ. ನಿಮಗೆ ಅಷ್ಟೊಂದು ಪ್ರಚಾರದ ಗೀಳಿದ್ದರೆ ಮಜಾ ಟಾಕೀಸ್ ಶೋನೋ, ಕಾಮಿಡಿ ಕಿಲಾಡಿಗಳು ಕಾರ್ಯಕ್ರಮಕ್ಕೆ ಹೋಗಿ. ನಿಮ್ಮ ಪ್ರಚಾರದ ಹಪಹಪಿಗೆ ಕೈವಾರ ತಾತಯ್ಯನವರನ್ನು ಅವಮಾನಿಸಬೇಡಿ’ ಎಂದು ತಿರುಗೇಟು ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments