Webdunia - Bharat's app for daily news and videos

Install App

ಸರ್ಕಾರ ಜನರ ಹುಣ್ಣಿನ ಮೇಲೆ ಬರೆ ಹಾಕುತ್ತಿದೆ: ಛಲವಾದಿ ನಾರಾಯಣಸ್ವಾಮಿ

Krishnaveni K
ಗುರುವಾರ, 20 ಜೂನ್ 2024 (12:17 IST)
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿದ್ದು ಖಂಡನೀಯ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತೈಲ ಬೆಲೆ ಏರಿಕೆಯಿಂದ ದವಸಧಾನ್ಯಗಳ ಬೆಲೆ ಏರಿಕೆಯಾಗಿದೆ. ನೀರಿನ ದರ ಏರಿಕೆ ಕುರಿತು ಈಗ ಹೇಳಿಕೆ ಹೊರಬಿದ್ದಿದೆ ಎಂದು ಆಕ್ಷೇಪಿಸಿದರು.

ಸ್ಟಾಂಪ್ ಪೇಪರ್ ಬೆಲೆ ಏರಿಕೆಯಿಂದ ಆಸ್ತಿ ನೋಂದಣಿಗೆ ಹೆಚ್ಚು ಹಣ ಕೊಡಬೇಕಾಗಿದೆ. ಇವರು ನುಡಿದಂತೆ ನಡೆದಿಲ್ಲ. ಸಿದ್ದರಾಮಯ್ಯನವರು ಹೇಳೋದೊಂದು ಮಾಡೋದೊಂದು ಎಂದು ಅವರು ಟೀಕಿಸಿದರು. ಇದನ್ನು ವಿರೋಧಿಸಿ ಇವತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಿ.ಟಿ.ರವಿ, ಡಾ.ಅಶ್ವತ್ಥನಾರಾಯಣ್ ಅವರ ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾದೆವು. ಇದಕ್ಕಾಗಿ ಸೈಕಲ್ ಯಾತ್ರೆಗೆ ಮುಂದಾಗಿದ್ದೆವು ಎಂದರು.

ಮುಖ್ಯಮಂತ್ರಿಗಳು ನಿನ್ನೆಯಿಂದ ಇಂಥ ವಿರೋಧವನ್ನು ಹತ್ತಿಕ್ಕುವ ಕೆಲಸ ಪ್ರಾರಂಭಿಸಿದ್ದಾರೆ. ಮಾನ್ಯ ಗೃಹ ಸಚಿವರು ಆ ರೀತಿ ಮಾಡಿದ್ದೇ ಆದರೆ, ನಮ್ಮ ಲಾಠಿ ರುಚಿ ತೋರಿಸುವುದಾಗಿ ಹೇಳಿದ್ದಾರೆ. ಇದು ಉದ್ಧಟತನದ ಪರಮಾವಧಿ ಅಲ್ಲವೇ ಎಂದು ಪ್ರಶ್ನಿಸಿದರು.

ಒಂದು ವಿರೋಧ ಪಕ್ಷವಾಗಿ ನೀವು ಮಾಡಿದ ತಪ್ಪುಗಳನ್ನು ಎತ್ತಿ ಹಿಡಿಯುವ ಕೆಲಸ ಯಾವುದು? ವಿಪಕ್ಷಗಳು ಹೋರಾಟದ ಮೂಲಕ ಜನರ ಅನಿಸಿಕೆಗಳನ್ನು ನಿಮ್ಮ ಗಮನಕ್ಕೆ ತರುವುದು ನಮ್ಮ ಕರ್ತವ್ಯ ಎಂದು ಅಭಿಪ್ರಾಯಪಟ್ಟರು. ಅಂಥ ಪ್ರಜಾಪ್ರಭುತ್ವ ವ್ಯವಸ್ಥೆಗೂ ಅವಕಾಶ ಕೊಡದಿದ್ದರೆ ನೀವೆಂಥ ಸರಕಾರ ಮಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದರು. ಇದೇನು ಹಿಟ್ಲರ್ ಸರಕಾರವೇ? ಸಿಎಂ ಅಥವಾ ಗೃಹ ಸಚಿವರು ಹಿಟ್ಲರ್ ಆಗಿದ್ದಾರಾ ಎಂದೂ ಆಕ್ಷೇಪಿಸಿದರು. ಹೀಗೆ ಹತ್ತಿಕ್ಕುವ ಕಾರ್ಯವನ್ನು ನಮ್ಮ ಸರಕಾರ ಯಾವತ್ತೂ ಮಾಡಿಲ್ಲ ಎಂದು ನುಡಿದರು.

ಇವರು ಬಂಧಿಸಲು ನಮ್ಮ ಕಚೇರಿಯ ಬಾಗಿಲಿಗೇ ಬರುತ್ತಾರೆ; ನಮ್ಮ ಅಧ್ಯಕ್ಷರು, ನಮ್ಮೆಲ್ಲರನ್ನು ಅರೆಸ್ಟ್ ಮಾಡಿದ್ದಾರೆ. ಈ ಹೋರಾಟ ನಿರಂತರವಾಗಿ ನಡೆಯಲಿದೆ ಎಂದು ತಿಳಿಸಿದರು. ಬಡವರಿಗೆ ಆಸೆ, ಆಮಿಷಗಳನ್ನು ತೋರಿಸಿ ರಾಜ್ಯದಲ್ಲಿ ಚುನಾವಣೆ ವೇಳೆ ಜನರನ್ನು ಸೆಳೆದು, ಅವರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿ ಇವತ್ತು ನುಡಿದಂತೆ ನಡೆದಿದ್ದೇವೆ ಎನ್ನುತ್ತೀರಲ್ಲವೇ? ಇದು ಡೋಂಗಿ ಎಂದು ಟೀಕಿಸಿದರು.

ಜನರ ಹುಣ್ಣಿನ ಮೇಲೆ ಬರೆ ಹಾಕುವ ಕೆಲಸ ಸರಕಾರದಿಂದ ಆಗುತ್ತಿದೆ. ಇಂಥದ್ದನ್ನು ಸಹಿಸಿಕೊಂಡು ಕುಳಿತಿರಲು ಅಸಾಧ್ಯ. ನಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರು ಸೇರಿ ಇಡೀ ರಾಜ್ಯಾದ್ಯಂತ ನಿಮ್ಮ ವಿರುದ್ಧ ಪ್ರತಿಭಟನೆ ಮಾಡಿ ಈ ಸರಕಾರವನ್ನು ಆದಷ್ಟು ಬೇಗ ಮನೆಗೆ ಕಳಿಸಲು ಸಜ್ಜಾಗಿದ್ದಾರೆ. ರೈತ ಸಂಘಟನೆಗಳು, ದಲಿತ ಸಂಘಟನೆಗಳು, ಸಾರಿಗೆ ಸಂಘಟನೆಗಳು ಮೊದಲಾದವುಗಳನ್ನು ಒಗ್ಗೂಡಿಸಿ ನಿಮ್ಮ ವಿರುದ್ಧ ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟವನ್ನು ರೂಪಿಸಲು ಸಜ್ಜಾಗುತ್ತೇವೆ ಎಂದು ಎಚ್ಚರಿಸಿದರು.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತನ ಕಣ್ಣೀರು ಒರೆಸದಿದ್ದರೆ ಒಳಿತಾಗದು: ವಿಜಯೇಂದ್ರ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಫೌಂಡೇಶನ್ ಕೋರ್ಸ್ ಓರಿಯೆಂಟೇಶನ್ ಕಾರ್ಯಕ್ರಮ

ಮೊದಲ ಪಾಯಿಂಟ್‌ನಲ್ಲಿ ಬೆಳಗ್ಗೆಯಿಂದ ಮಣ್ಣು ಅಗೆದರು ಸಿಗದ ಕಳೆಬರಹ, ಧರ್ಮಸ್ಥಳ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್‌

ಮುಂದಿನ ಸುದ್ದಿ
Show comments