Webdunia - Bharat's app for daily news and videos

Install App

ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ದೂರು

Krishnaveni K
ಶನಿವಾರ, 18 ಮೇ 2024 (13:51 IST)
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಯುವತಿಯರ ಮೇಲಿನ ಹತ್ಯೆ, ಲೈಂಗಿಕ ದೌರ್ಜನ್ಯ ಸೇರಿದಂತೆ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಘಟನೆಗಳ ಬಗ್ಗೆ ಬಿಜೆಪಿ ನಿಯೋಗ ಇಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಲಿಖಿತ ದೂರು ನೀಡಿದೆ.

ರಾಜ್ಯದಲ್ಲಿ ಇತ್ತೀಚೆಗೆ ಕೊಲೆ ಪ್ರಕರಣಗಳು ಹೆಚ್ಚಾಗಿರುವುದು ಮತ್ತು ಅಪರಾಧ ಪ್ರಕರಣಗಳು ಹೆಚ್ಚಾಗಿರುವ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ನಿಯೋಗ ಪೊಲೀಸ್ ಮಹಾನಿರ್ದೇಶಕರಿಗೆ ಒತ್ತಾಯಿಸಿದೆ. ಬಿಜೆಪಿ ನಾಯಕ, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ನೇತೃತ್ವದಲ್ಲಿ ಇಂದು ಬಿಜೆಪಿ ನಿಯೋಗ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಡಿಜಿಪಿ ಕಚೇರಿಗೆ ಭೇಟಿ ನೀಡಿ ದೂರು ನೀಡಿದೆ.

ಹುಬ್ಬಳ್ಳಿಯಲ್ಲಿ ಒಂದೇ ತಿಂಗಳ ಅವಧಿಯಲ್ಲಿ ಎರಡು ಭೀಕರ ಕೊಲೆ ನಡೆದಿತ್ತು. ಕೊಡಗಿನಲ್ಲಿ ಇತ್ತೀಚೆಗೆ ಯುವತಿಯೊಬ್ಬಳ ಶಿರಚ್ಛೇದನ ಮಾಡಲಾಗಿತ್ತು. ಇಂತಹ ಹಲವು ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ವರದಿಯಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿತ್ತು. ಆದರೆ ಇತ್ತೀಚೆಗೆ ಕಾನೂನು ಸುವ್ಯವಸ್ಥೆ ತೀರಾ ಹದಗೆಟ್ಟಿದೆ. ಇದರಿಂದಾಗಿ ಅಪರಾಧಿಗಳ ರಾಜ್ಯ ಎಂಬ ಕೆಟ್ಟ ಹಣೆಪಟ್ಟಿ ಹೊರುವಂತಾಗಿದೆ. ರಾಜ್ಯ ಸರ್ಕಾರವು ಕಾನೂನು ಸುವ್ಯವಸ್ಥೆ ಪಾಲನೆಗೆ ಗಮನ ಕೊಡುತ್ತಿಲ್ಲ. ಅಪರಾಧ ಪ್ರಮಾಣ ಹೆಚ್ಚಾಗಲು ಇದುವೇ ಕಾರಣವಾಗುತ್ತಿದೆ. ಅಲ್ಲದೆ ರಾಜ್ಯ ಪೊಲೀಸರು ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಾಗ ದೂರು ದಾಖಲಿಸುತ್ತಿಲ್ಲ. ಹಿಂದೂ ಕಾರ್ಯಕರ್ತರ ಮೇಲೆ ಧ್ವೇಷ ಕಾರಲಾಗುತ್ತಿದೆ. ಇದರಿಂದಾಗಿ ರಾಜ್ಯ ಪೊಲೀಸ್ ಇದೆಯೋ ಇಲ್ಲವೋ ಎಂಬ ಅನುಮಾನ ಬರುವಂತಾಗಿದೆ ಎಂದು ದೂರಿನಲ್ಲಿ ಬಿಜೆಪಿ ಅಸಮಾಧಾನ ಹೊರಹಾಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold fraud case: ಇಡಿ ದಾಳಿ ವೇಳೆ ಐಶ್ವರ್ಯಾ ಗೌಡ ಮನೆಯಲ್ಲಿ ಸಿಕ್ತು ಕಂತೆ ಕಂತೆ ಹಣ, ಇಲ್ಲಿದೆ ಮಾಹಿತಿ

Namma Metro: ನಮ್ಮ ಮೆಟ್ರೋ ಪ್ರಯಾಣ ಸಮಯದಲ್ಲಿ ನಾಳೆ ಸಣ್ಣ ಬದಲಾವಣೆ

ಕರ್ನಾಟಕದಲ್ಲಿರುವ ಮುಸ್ಲಿಂ ಮಹಿಳೆಯರಿಗೆ ಪಾಕ್‌ ಮೇಲೆ ಎಂತಹ ಪ್ರೇಮ, ಪಾಕ್ ಧ್ವಜಕ್ಕೆ ಗೌರವ

Video: ತಿಕ ತೊಳೆಯಕ್ಕೂ ನೀರು ಕೊಡಲ್ಲ ಎಂದ ಭಾರತೀಯರ ವಿರುದ್ಧ ಗಂಟಲು ಸೀಳ್ತೀನಿ ಎಂದು ಸನ್ನೆ ಮಾಡಿ ಪಾಕಿಸ್ತಾನ ರಾಯಭಾರಿ

Video, ಗುಜರಾತ್‌ನಲ್ಲಿ ಪಾಕಿಸ್ತಾನ ಮಾತ್ರವಲ್ಲ ಬಾಂಗ್ಲಾ ವಲಸಿಗರಿಗೂ ಗೇಟ್ ಪಾಸ್ : ಸ್ವಚ್ಛ ಭಾರತ್ ಅಭಿಯಾನ ಶುರು

ಮುಂದಿನ ಸುದ್ದಿ