ತುಂಗಭದ್ರಾ ಡ್ಯಾಮ್ ಸ್ಥಿತಿ ಅವಲೋಕಿಸಿದ ಬಿಜೆಪಿ ನಿಯೋಗ (Video)

Krishnaveni K
ಸೋಮವಾರ, 12 ಆಗಸ್ಟ್ 2024 (14:08 IST)
ಕೊಪ್ಪಳ: ಬಯಲು ಸೀಮೆಯ ರೈತರ ಜೀವನಾಡಿಯಾಗಿದ್ದ ತುಂಗಭದ್ರಾ ಡ್ಯಾಮ್ ಚೈನ್ ಕಟ್ ಆಗಿ ಈಗ ಅಪಾಯದ ಪರಿಸ್ಥಿತಿಯಿದ್ದು ಇಂದು ಬಿಜೆಪಿ ನಾಯಕರ ನಿಯೋಗ ಡ್ಯಾಮ್ ಬರಳಿ ತೆರಳಿ ಪರಿಶೀಲನೆ ನಡೆಸಿದೆ.
 

ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರ ದಂಡು ಇಂದು ತುಂಗಭದ್ರಾ ಡ್ಯಾಮ್ ಗೆ ತೆರಳಿ ಪರಿಶೀಲನೆ ನಡೆಸಿದೆ. ಈ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ಮಾಧ್ಯಮ ಪ್ರತಿನಿಧಿಗಳು, ಜನರು ಸೇರಿದ್ದರು.

ತುಂಗಭದ್ರಾ ಡ್ಯಾಮ್ ಚೈನ್ ಕಟ್ ಆಗಿರುವುದರಿಂದ ಸಾಕಷ್ಟು ನೀರು ಹರಿದುಹೋಗುತ್ತಿದ್ದು, ಸುತ್ತಮುತ್ತಲ ಪ್ರದೇಶದ ಜನರಿಗೆ ನೆರೆ ಭೀತಿ ಎದುರಾಗಿದೆ. ಕೇವಲ ಕರ್ನಾಟಕ ಮಾತ್ರವಲ್ಲ, ನೆರೆ ರಾಜ್ಯವಾದ ತೆಲಂಗಾಣದ ರೈತರಿಗೂ ಪ್ರವಾಹದ ಭೀತಿ ಎದುರಾಗಿದೆ. ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚೈನ್ ದುರಸ್ಥಿಗೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ತುಂಗಭದ್ರಾ ಡ್ಯಾಮ್ 100 ಟಿಎಂಸಿ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವಿದೆ. ಆದರೆ ಈಗ ಭಾರೀ ಮಳೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿತ್ತು. ಇದರ ಬೆನ್ನಲ್ಲೇ ಚೈನ್ ಕಟ್ ಆಗಿರುವುದರಿಂದ ಸಾಕಷ್ಟು ನೀರು ಪೋಲಾಗುತ್ತಿದೆ. ನಾಳೆ ಸಿಎಂ ಸಿದ್ದರಾಮಯ್ಯ ಕೂಡಾ ಇಲ್ಲಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಇಟಿ ಹಗರಣಕ್ಕೆ ಧರ್ಮೇಂದ್ರ ಪ್ರಧಾನ್ ತಲೆದಂಡಕ್ಕೆ ಪ್ರತಿಪಕ್ಷಗಳ ಪಟ್ಟು: ಲೋಕಸಭೆ ಕಲಾಪ ಸೋಮವಾರಕ್ಕೆ

ಶಾಸಕಿ ಅಂದ್ರೆ ಹೀಗಿರ್ಬೇಕು.. ಅಧಿಕಾರಿಯನ್ನು ಸಾರ್ವಜನಿಕವಾಗಿ ಕಾಲರ್ ಪಟ್ಟಿ ಹಿಡಿದು ದರ ದರನೆ ಎಳೆದು ತಂದ ಶಾಸಕಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈಗ ರೈತ ಮಕ್ಕಳ ಸೀಟುಗಳೂ ಮಾರಾಟವಾಗುತ್ತಿವೆ: ಛಲವಾದಿ ನಾರಾಯಣಸ್ವಾಮಿ

ಎದೆ ಸೀಳಿದ್ರೆ ಮೂರು ಅಕ್ಷರ ಇಲ್ಲದ ಮುಲ್ಲಾಗಳಿಗೂ ನೀಟ್ ಪ್ರತಿಭಟನೆಗೂ ಏನು ಸಂಬಂಧ: ಸಿಟಿ ರವಿ ವಿವಾದ

ಮುಂದಿನ ಸುದ್ದಿ
Show comments