Webdunia - Bharat's app for daily news and videos

Install App

ಕರ್ನಾಟಕ ಬಿಜೆಪಿಗೆ ಸೋಲಿಗೆ ಕಾರಣ ಕಾಂಗ್ರೆಸ್-ಜೆಡಿಎಸ್ ಅಲ್ಲ!

Webdunia
ಬುಧವಾರ, 7 ನವೆಂಬರ್ 2018 (08:52 IST)
ಬೆಂಗಳೂರು: ಲೋಕಸಭೆ ಉಪಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳು ಇದು ಮುಂಬರುವ ಲೋಕಸಭೆ ಚುನಾವಣೆಗೆ ಟ್ರೇಲರ್ ಎಂದೇ ಅಂದುಕೊಂಡಿವೆ.


ಆದರೆ ಬಿಜೆಪಿ ಸೋಲಿಗೆ ಈ ಎರಡೂ ಪಕ್ಷಗಳು ಕಾರಣವಲ್ಲ ಎನ್ನುವುದು ಈ ಮೈತ್ರಿ ಪಕ್ಷಗಳಿಗೂ ಗೊತ್ತು. ಕರ್ನಾಟಕ ಬಿಜೆಪಿಯಲ್ಲಿ ಒಗ್ಗಟ್ಟಿನ ಕೊರತೆ, ಸಶಕ್ತ ನಾಯಕತ್ವದ ಕೊರತೆ, ಚುನಾವಣೆಯಲ್ಲಿ ಒಗ್ಗೂಡಿ ಹೋರಾಡುವ ಆಸಕ್ತಿ ಇಲ್ಲದೇ ಇರುವುದೇ ಈ ಸೋಲಿಗೆ ಕಾರಣ.

ಇದೇ ಕಾರಣಕ್ಕೆ ಇದೀಗ ಹೈಕಮಾಂಡ್ ಕೂಡಾ ಕರ್ನಾಟಕದ ಬಿಜೆಪಿ ನಾಯಕರ ಮೇಲೆ ಮುನಿಸಿಕೊಂಡಿದೆ. ಬಳ್ಳಾರಿಯಲ್ಲಿ ಸ್ಥಳೀಯ ನಾಯಕ ಶ್ರೀರಾಮುಲು ಬಿಟ್ಟರೆ ಬೇರೆ ಯಾರೂ ಹೇಳಿಕೊಳ್ಳುವಂತಹ ಪ್ರಚಾರ ನಡೆಸಿಲ್ಲ. ಶಿವಮೊಗ್ಗದಲ್ಲಿ ತಮ್ಮ ತವರು ಮತ್ತು ಪುತ್ರ ಸ್ಪರ್ಧಿಸುತ್ತಿದ್ದಾರೆಂಬ ಕಾರಣಕ್ಕೆ ಬಿಎಸ್ ಯಡಿಯೂರಪ್ಪ ತಾವೇ ಖುದ್ದಾಗಿ ನಿಂತು ಪ್ರಚಾರ ನಡೆಸಿದರು. ಆದರೆ ಉಳಿದ ನಾಯಕರು ಈ ಕ್ಷೇತ್ರದ ಕಡೆಗೆ ತಲೆಯೂ ಹಾಕಲಿಲ್ಲ. ಕನಿಷ್ಠ ಸಾಮಾಜಿಕ ಜಾಲತಾಣಗಳಲ್ಲೋ, ಹೇಳಿಕೆ ಮುಖಾಂತರವೋ ತಮ್ಮ ಪಕ್ಷದ ಪರ ಸಮರ್ಥಿಸುವ ಕೆಲಸವನ್ನೂ ಮಾಡಲಿಲ್ಲ.

ರಾಮನಗರ, ಮಂಡ್ಯ ಬಗ್ಗೆ ಬಿಜೆಪಿ ಸಂಪೂರ್ಣವಾಗಿ ನಿರ್ಲಕ್ಷ್ಯ ಧೋರಣೆ ಅನುಸರಿಸಿತು. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ನ ಘಟಾನುಘಟಿ ನಾಯಕರೇ ಜತೆಯಾಗಿ ಪ್ರಚಾರಕ್ಕಿಳಿದಿದ್ದರು. ಹೀಗಾಗಿ ಸಹಜವಾಗಿಯೇ ಬಿಜೆಪಿ ನಾಯಕರ ಮತ್ತು ನಾಯಕತ್ವದ ಮೇಲೆ ಜನ ಅನುಮಾನದಿಂದಲೇ ನೋಡುವಂತಾಗಿದೆ.

ಆಡಳಿತ ಪಕ್ಷವನ್ನು ಖಡಾ ಖಂಡಿತವಾಗಿ ಖಂಡಿಸುವ ಧ್ವನಿಯಿಲ್ಲದೇ, ವಿರೋಧ ಪಕ್ಷವಾಗಿಯೂ ಕಡ್ಡಿ ಮುರಿದಂತೆ ಕೆಲಸ ಮಾಡದೇ, ತಮ್ಮ ಪಕ್ಷದಿಂದ ಜನರು ಹೊಸತನ ನಿರೀಕ್ಷಿಸಬಹುದು ಎಂಬ ಭರವಸೆ ಮೂಡಿಸದೇ ಬಿಜೆಪಿ ಸಪ್ಪೆಯಾಗಿದೆ. ಇದೇ ಕಾರಣಕ್ಕೆ ಸೋಲುತ್ತಿದೆ. ಇದು ಹೀಗೇ ಮುಂದುವರಿದರೆ ಲೋಕಸಭೆ ಚುನಾವಣೆಯಲ್ಲೂ ಇದೇ ಕತೆ ಗ್ಯಾರಂಟಿ.


ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments