ಬೆಂಗಳೂರು ವಿಭಜನೆಯ ವಿಧೇಯಕಕ್ಕೆ ಬಿಜೆಪಿ ಆಕ್ರೋಶ

Krishnaveni K
ಬುಧವಾರ, 24 ಜುಲೈ 2024 (09:28 IST)
ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಮಂಡಿಸಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಮಾತನಾಡಿರುವ ವಿಪಕ್ಷ ನಾಯಕ ಆರ್ ಅಶೋಕ್ ನಾವೂ ಬೆಂಗಳೂರಿನಲ್ಲೇ ಹುಟ್ಟಿ ಬೆಳೆದು, ಇಲ್ಲೇ ಸಾಯುವವರು. ನಮ್ಮ ಜೊತೆಗೂ ಚರ್ಚಿಸಿ ಎಂದಿದ್ದಾರೆ.

ಪ್ರತಿಪಕ್ಷಗಳ ಗದ್ದಲ, ಆಕ್ಷೇಪದ ನಡುವೆಯೇ ನಿನ್ನೆ ವಿಧೇಯಕವನ್ನು ಮಂಡಿಸಲಾಗಿದೆ. ಆದರೆ ವಿಧೇಯಕ ಅಧ್ಯಯನಕ್ಕೆ ಸಮಯಾವಕಾಶ ಬೇಕೆಂದು ಬಿಜೆಪಿ ಕೇಳಿದೆ. ವಿಧಾನಸಭೆಯಲ್ಲಿ ಇದೀಗ ಅನುಮೋದನೆ ಪಡೆದರೂ ವಿಧಾನಪರಿಷತ್ ನಲ್ಲಿ ವಿಧೇಯಕಕ್ಕೆ ಅನುಮೋದನೆ ಸಿಗುವುದು ಕಷ್ಟವಾಗಿದೆ.

172 ಪುಟಗಳ ವಿಧೇಯಕವನ್ನು ಏಕಾಏಕಿ ಮಂಡಿಸಿ ಪಾಸ್ ಮಾಡುವುದು ಸರಿಯಲ್ಲ. ನಮಗೂ ಚರ್ಚೆಗೆ ಅವಕಾಶ ಕೊಡಬೇಕು ಎಂದು ಅಶೋಕ್ ಹೇಳಿದ್ದಾರೆ. 1 ಕೋಟಿ ಬೆಂಗಳೂರನ್ನು ಬಿಬಿಎಂಪಿಗೆ ಆಳಲು ಸಾಧ್ಯವಾಗುವುದಿಲ್ಲ ಎಂದರೆ ನಾಚಿಕೆಗೇಡು ಎಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ವಿಧೇಯಕದಲ್ಲಿರುವ ಪ್ರಮುಖ ಅಂಶಗಳೆಂದರೆ ಅಧಿಸೂಚನೆ ಬಳಿಕ ಸ್ಥಳೀಯ ಸಂಸ್ಥೆಗಳ ಅಸ್ತಿತ್ವ ರದ್ದು ಮಾಡುವುದು, ನಗರ ಪಾಲಿಕೆಗಳನ್ನು ಆರ್ಥಿಕ, ಕೃಷಿ, ಉದ್ಯೋಗ, ಮೂಲ ಸೌಕರ್ಯಗಳನ್ನು ನೋಡಿಕೊಂಡು ವಿಭಜಿಸುವುದು, 4 ದಿಕ್ಕಿನ ಗಡಿ ಗುರುತಿಗೆ ಕಲ್ಲು, 5 ವರ್ಷಕ್ಕೊಮ್ಮೆ ಮೇಯರ್ ನೇಮಕ ಇತ್ಯಾದಿಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments