ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

Krishnaveni K
ಶುಕ್ರವಾರ, 6 ಮಾರ್ಚ್ 2026 (16:17 IST)
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯ ಬಜೆಟ್ ಖಾಲಿ ಚೊಂಬಿನಂತಿದೆ ಎಂದು ಆಕ್ಷೇಪಿಸಿ ಬಿಜೆಪಿ ವತಿಯಿಂದ ಇಂದು ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಲಾಯಿತು.
 
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ಮಾಜಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಿದ್ದರು.
 
ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ ಎಂಬ ಪೋಸ್ಟರ್ ಹಿಡಿದು ಎಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಪ್ರಮುಖರು ಕೈಯಲ್ಲಿ ಖಾಲಿ ಚೊಂಬನ್ನು ಪ್ರದರ್ಶಿಸಿದರು.
 
ಯುವಕರಿಗೆ ಮೋಸ ಮಾಡಿದ ಸರಕಾರಕ್ಕೆ ಧಿಕ್ಕಾರ, 3 ವರ್ಷದಲ್ಲಿ ಮೂರೂವರೆ ಲಕ್ಷ ಕೋಟಿ ಸಾಲ ಮಾಡಿದ ಸರಕಾರಕ್ಕೆ ಧಿಕ್ಕಾರ, ಬಜೆಟ್ಟಂತೆ ಬಜೆಟ್ ಖಾಲಿ ಚೊಂಬಿನ ಬಜೆಟ್- ಎಂಬಿತ್ಯಾದಿ ಘೋಷಣೆಗಳನ್ನು ಕೂಗಲಾಯಿತು. ರಾಜ್ಯದ ಜನರಿಗೆ ಖಾಲಿ ಚೊಂಬು ನೀಡಿದ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಕನ್ನಡಿಗÀರಿಗೆ ಖಾಲಿ ಚೊಂಬು ನೀಡಿದ ಸಿದ್ದರಾಮಯ್ಯನವರಿಗೆ ಧಿಕ್ಕಾರ ಎಂದು ಕೂಗಿದರು. ರಾಜ್ಯದ ರೈತರಿಗೆ ಖಾಲಿ ಚೊಂಬು ಕೊಟ್ಟ ಸರಕಾರಕ್ಕೆ ಧಿಕ್ಕಾರ ಎಂದು ಕೂಗಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಕೇಂದ್ರ ಸಚಿವರ ಮಗಳೊಬ್ಬಳ ಎಂತಹ ದರ್ಪ: ಕರ್ತವ್ಯದಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಮೇಲೆ ಹೀಗೇ ನಡೆದುಕೊಳ್ಳುವುದಾ, Video

ಎಲ್ಲರೂ ಇಷ್ಟು ಒಳ್ಳೇವ್ರು ಆಗಿರಲ್ಲ... ನೆನೆಯುತ್ತಿದ್ದ ಶಾಲಾ ಬಾಲಕಿ ನೋಡಿ ಅಧಿಕಾರಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

ಯಾಕೋ ಮೊದಲೇ ಹೇಳಿಲ್ಲ.. ರೋಗಿ ಮಾಡಿದ ಕೆಲಸಕ್ಕೆ ಪಿತ್ತ ನೆತ್ತಿಗೇರಿ ವೈದ್ಯರೊಬ್ಬರು ಮಾಡಿದ್ದೇನು ಗೊತ್ತಾ Video

ಪಾಕ್‌ನ ಪ್ರತಿಯೊಂದು ದುಸ್ಸಾಹಸಕ್ಕೂ, ಊಹಿಸದ ರೀತಿಯಲ್ಲಿ ಉತ್ತರ ನೀಡುತ್ತೇವೆ

Bidar: ಆಸ್ಪತ್ರೆ ಒಳಗೇ ಬೈಕ್ ನುಗ್ಗಿಸಿದ್ದ ಅಸಾಮಿ: ಪೊಲೀಸರಿಂದ ಬಿತ್ತು ಹಿಗ್ಗಾ ಮುಗ್ಗಾ ಗೂಸಾ video

ಮುಂದಿನ ಸುದ್ದಿ
Show comments