ಅಧಿವೇಶನ ಆರಂಭಕ್ಕೆ ಮೊದಲೇ ಬಿಜೆಪಿ ಪ್ರತಿಭಟನೆ

Krishnaveni K
ಸೋಮವಾರ, 11 ಆಗಸ್ಟ್ 2025 (12:09 IST)
ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಅಧಿವೇಶನ ಆರಂಭಕ್ಕೆ ಮುನ್ನವೇ ವಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಿದೆ. ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗ ಪ್ರತಿಭಟನೆ ನಡೆಸಿದೆ.

ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮುನ್ನ ಇಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸರ್ಕಾರದ ಬೇಜವಾಬ್ದಾರಿತನದಿಂದ 11 ಜನ ಅಮಾಯಕರ ಸಾವಿಗೆ ಕಾರಣವಾದ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಘಟನೆ ಖಂಡಿಸಿ ಇಂದು ಅಧಿವೇಶನಕ್ಕೂ ಮುನ್ನ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ NDA ಮೈತ್ರಿಕೂಟದ ಶಾಸಕರೊಂದಿಗೆ ಪ್ರತಿಭಟನೆ ನಡೆಸಲಾಗಿದೆ. ರಾಜ್ಯ ಸರ್ಕಾರದ ಆಡಳಿತ ವೈಫಲ್ಯದಿಂದ ಬೆಂಗಳೂರಿನ ಐಪಿಎಲ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಪ್ರಚಾರದ ಗೀಳಿಗೆ 11 ಜನ ಅಮಾಯಕರನ್ನು ಬಲಿಪಡೆದಿದೆ ಎಂದು ಬಿಜೆಪಿ ಪ್ರತಿಭಟನೆ ನಡೆಸಿದೆ.

ಸದನದಲ್ಲೂ ಈ ವಿಚಾರವನ್ನು ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಇದಲ್ಲದೆ, ರಸಗೊಬ್ಬರ ಕೊರತೆ, ಜಾತಿಗಣತಿ ವಿಚಾರವನ್ನೂ ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಯೋಜನೆ ರೂಪಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ರಾಜ್ಯದಲ್ಲಿ 25 ಲಕ್ಷ ಬಾಂಗ್ಲಾದೇಶೀಯರಿದ್ದು, ಬೇರೆ ದೇಶದವರೂ ಮತದಾರರಾಗಬೇಕೆ

ಗರ್ಭಿಣಿಯಾಗಿದ್ದಾಗ ಅನಾರೋಗ್ಯ, ಮದುವೆಯಾದ 2 ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು

ಮುಂಬೈ: ಶಾಲಾ ಬಸ್ ಮೇಲೆ ಬಿದ್ದ ಮರ, 10ಮಕ್ಕಳಿಗೆ ಗಾಯ, ಒಂದು ಮಗುವಿನ ರಕ್ಷಣೆಗೆ ನಿರಂತರ ಕಾರ್ಯಾಚರಣೆ

ಕೇತನ್‌ ಜತೆಗಿನ ಮದುವೆ, ಚೇತನ್‌ ಜತೆಗಿನ ಸಂಬಂಧದ ಬಗ್ಗೆ ಸಿಯಾ ಸಹೋದರನಿಗೆ ಎಲ್ಲಾ ಗೊತ್ತಿತ್ತಾ

ಎಲಾ... ಕಳ್ಳ.. ಪ್ರಧಾನಿ ಮೋದಿ ಮುಖವಾಡ ಧರಿಸಿ ಮೊಬೈಲ್ ಶಾಪ್ ಗೆ ಕನ್ನ, ಈತನ ಕರಾಮತ್ತಿಗೆ ಪೊಲೀಸರೇ ಶಾಕ್ video

ಮುಂದಿನ ಸುದ್ದಿ
Show comments